Webdunia - Bharat's app for daily news and videos

Install App

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್‌: 14 ವರ್ಷಗಳ ವನವಾಸದ ನಂತರ ಬಳ್ಳಾರಿ ಪ್ರವೇಶಕ್ಕೆ ಅನುಮತಿ

Sampriya
ಸೋಮವಾರ, 30 ಸೆಪ್ಟಂಬರ್ 2024 (14:38 IST)
Photo Courtesy X
ಬಳ್ಳಾರಿ: ಮಾಜಿ ಸಚಿವ, ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. 14 ವರ್ಷಗಳ ಬಳಿಕ ಬಳ್ಳಾರಿಗೆ ತೆರಳಲು ಅವರಿಗೆ ಅನುಮತಿ ಸಿಕ್ಕಿದೆ.

ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ಕಳೆದ ಒಂದೂವರೆ ದಶಕಗಳಿಂದ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೊನೆಗೂ ಅನುಮತಿ ನೀಡಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಾಗ ಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿತ್ತು. ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಬೆಂಗಳೂರಿನ ಪಾರಿಜಾತ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು.

ಜನಾರ್ದನ ರೆಡ್ಡಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಆದ್ದರಿಂದ ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐಷಾರಾಮಿ ನಿವಾಸದಲ್ಲಿ ವಾಸ್ತವ್ಯವನ್ನು ಹೂಡಬಹುದು.

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ವಿವಾಹದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಅನುಮತಿ ಪಡೆದು ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು. ವಿವಾಹದ ಕಾರಣ 10ಕ್ಕೂ ಹೆಚ್ಚು ದಿನಗಳ ಕಾಲ ಅವರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಕೋರ್ಟ್ ಅನುಮತಿ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments