Webdunia - Bharat's app for daily news and videos

Install App

ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣದಿಂದ ಕುಮಾರಸ್ವಾಮಿಗೆ ಬಿಗ್ ರಿಲೀಫ್

Webdunia
ಗುರುವಾರ, 29 ಆಗಸ್ಟ್ 2019 (10:49 IST)
ಬೆಂಗಳೂರು : ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರನ್ನು ಕೈಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.



ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಬಂಧಿಸಿ ವಿಚಾರಣೆ ನಡೆಸಿದಾಗ ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ವಿನೋದ್ ಘೋಯಲ್‍ಗೆ ಭೂಮಿ ಮಂಜೂರು ಮಾಡುವಂತೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೆ ಮೌಖಿಕವಾಗಿ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು.

 

ಆದರೆ ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಅಲ್ಲದೇ ವಿನೋದ್ ಘೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎನ್ನಲಾಗಿದೆ.  ಹೀಗಾಗಿ ಹೆಚ್.ಡಿ.ಕುಮಾರಸ್ವಾಮಿ ಹೆಸರನ್ನು ಕೈಬಿಟ್ಟು ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments