ನ್ಯಾಯಮೂರ್ತಿಗೆ ಲಂಚ ನೀಡಲು 160 ಕೋಟಿ ರೂ. ಡೀಲ್ ಕುದುರಿಸಿದರೇ ಬಿ ಶ್ರೀರಾಮುಲು?!

Webdunia
ಗುರುವಾರ, 10 ಮೇ 2018 (18:20 IST)
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಜನಾರ್ಧನ ರೆಡ್ಡಿಯವರನ್ನು ಹೊರತರಲು ನ್ಯಾಯಮೂರ್ತಿ ಸಿಜೆಐ ಬಾಲಕೃಷ್ಣನ್ ಸಂಬಂಧಿಕರಿಗೆ ಭಾರೀ ಮೊತ್ತದ ಹಣ ಆಮಿಷ ಒಡ್ಡಲಾಗಿತ್ತಾ?

ಹೀಗೊಂದು ದೇಶವೇ ಬೆಚ್ಚಿ ಬೀಳುವಂತಹ ಹಗರಣವೊಂದು ಬೆಳಕಿಗೆ ಬಂದಿದೆ. ಜನಾರ್ಧನ ರೆಡ್ಡಿ ಬಿಡುಗಡೆಗೆ ಅವರ ಸ್ನೇಹಿತ ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮತ್ತು ರೆಡ್ಡಿ ಪರ ವಕೀಲರು ನ್ಯಾಯಮೂರ್ತಿ ಬಾಲಕೃಷ್ಣ ಅವರ ಅಳಿಯ ಶ್ರೀನಿಜಿ ಜತೆಗೆ 160 ಕೋಟಿ ರೂ.ಗಳ ಡೀಲ್ ಕುದುರಿಸಿದ್ದರು ಎಂಬ ವರದಿಯನ್ನು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

2010 ರಲ್ಲಿ ಈ ಪ್ರಕರಣ ನಡೆದಿತ್ತು. ಈ ಸಂದರ್ಭದಲ್ಲಿ ಶ್ರೀರಾಮುಲು ಬಿಜೆಪಿ ಸರ್ಕಾರದ ಸಚಿವರಾಗಿದ್ದರು. ಇದೀಗ ಈ ಡೀಲ್ ಕುದುರಿಸುವ ದೃಶ್ಯಗಳ ವಿಡಿಯೋವನ್ನು ಖಾಸಗಿ ವಾಹಿನಿ ವರದಿ ಮಾಡಿದ್ದು, ಮಧ್ಯವರ್ತಿಗಳಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಶ್ರೀರಾಮುಲು ವರ್ಚಸ್ಸಿಗೆ ಇದು ನಿಜಕ್ಕೂ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments