Publish Date: Sat, 02 May 2026 (20:22 IST)
Updated Date: Sat, 02 May 2026 (20:27 IST)
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆಯಾಗಿದೆ. ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.
ಪಶ್ಚಿಮ ಬಂಗಾಲ ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ. ಪಂಚ ರಾಜ್ಯ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಬಿಗ್ ಫೈಟ್ ನಡೆಯುತ್ತಿದೆ.
ಇದೀಗ ಪಶ್ಚಿಮ ಬಂಗಾಲ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಸೂಪರ್ ವೈಸರ್ ಗಳಾಗಿ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನೇಮಿಸಿರುವುದನ್ನು ಪ್ರಶ್ನಿಸಿ ದೀದಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇವರು ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುವವರು ಎಂದು ದೀದಿ ಆರೋಪವಾಗಿದೆ.
ಆದರೆ ದೀದಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನಿಯೋಜಿಸಿರುವುದರಲ್ಲಿ ಕಾನೂತ್ಮಕವಾಗಿ ಯಾವುದೇ ತಪ್ಪಿಲ್ಲ ಎಂದು ತೀರ್ಪು ನೀಡಿದೆ. ಇದು ದೀದಿಗೆ ದೊಡ್ಡ ಹಿನ್ನಡೆಯಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ