Webdunia - Bharat's app for daily news and videos

Install App

ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್; ಕಾಂಗ್ರೆಸ್‍ ನ ಮತ್ತೊಬ್ಬ ಶಾಸಕ ಅತೃಪ್ತರ ಗುಂಪಿಗೆ ಸೇರ್ಪಡೆ

Webdunia
ಶನಿವಾರ, 9 ಫೆಬ್ರವರಿ 2019 (09:26 IST)
ಬೆಂಗಳೂರು : ಕಾಂಗ್ರೆಸ್‍ ನ ಮತ್ತೊಬ್ಬ ಶಾಸಕರು ಅತೃಪ್ತರ ಪಟ್ಟಿಗೆ ಸೇರಿದ ಕಾರಣ, ಅತೃಪ್ತ ಶಾಸಕರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಇದರಿಂದ ಮೈತ್ರಿ ಸರ್ಕಾರದಲ್ಲಿ ಆತಂಕ ಶುರುವಾಗಿದೆ.


ಈಗಾಗಲೇ ಕಾಂಗ್ರೆಸ್‍ ನ ಅತೃಪ್ತ ಶಾಸಕರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ನಾಗೇಂದ್ರ, ಉಮೇಶ್ ಜಾಧವ್ ಹಾಗೂ ಮಹೇಶ್ ಕುಮಟಳ್ಳಿ ಪಕ್ಷದವರ ಮೇಲಿನ ಬೇಸರದಿಂದ ಯಾರ ಕೈಗೂ ಸಿಗದೇ ದೂರ ಉಳಿದಿದ್ದಾರೆ.


ಹಾಗೇ  ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ಅವರು ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಪಕ್ಷದಿಂದ ದೂರವಿದ್ದರೂ ಕಳೆದ ಬಾರಿಯ ಸಿಎಲ್‍ ಪಿ ಸಭೆಗೆ ಬಂದು ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದಿದ್ದರು. ಆದರೆ ಇದೀಗ ಬಿಸಿ ಪಾಟೀಲ್ ಅವರು ನಿನ್ನೆ ರಾತ್ರಿ  ಮುಂಬೈನ ರೆಸಾರ್ಟ್ ಗೆ ತೆರಳಿ ಅತೃಪ್ತ ಶಾಸಕರ ಜೊತೆ ಸೇರಿಕೊಂಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments