ಸರ್ಕಾರ ರಚನೆಗೆ ಮುಂದಾದ ಬಿಜೆಪಿಯವರಿಗೆ ಬಿಗ್ ಶಾಕ್; ಅತೃಪ್ತರ ಸೇರ್ಪಡೆಗೆ ಪಕ್ಷದಿಂದ ವಿರೋಧ

Webdunia
ಮಂಗಳವಾರ, 9 ಜುಲೈ 2019 (10:23 IST)
ಬೆಂಗಳೂರು : ಮೈತ್ರಿ ಸರ್ಕಾರದ ಕೆಲವು ನಾಯಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಸರ್ಕಾರ ನಡೆಸಬೇಕೆಂದುಕೊಂಡಿದ್ದ ಬಿಜೆಪಿಯವರಿಗೆ ಇದೀಗ ಬಿಗ್ ಶಾಕ್ ಕಾದಿದೆ.




ಹೌದು. ಕೆಲವು ಅತೃಪ್ತ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ನಾಲ್ವರು ಅತೃಪ್ತ ಶಾಸಕರಾದ ಮುನಿರತ್ನ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಅಂಜಲಿ ನಿಂಬಾಳ್ಕರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊ‍ಳ್ಳಲು ಪಕ್ಷದ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ನಾಲ್ವರು ಸದಸ್ಯತ್ವ ಅಭಯಾನ ನಿಲ್ಲಿಸಿ ಖಾನಪುರ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.


ಅಲ್ಲದೇ ಮತ್ತೊಂದೆಡೆ ಆರ್.ಎಸ್.ಎಸ್ ನಿಂದಲೂ ಅಪರೇಷನ್ ಗೆ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರಿನ ಆರ್.ಎಸ್.ಎಸ್ ಕಚೇರಿಯಲ್ಲಿ ನಾಯಕರು ಸಭೆ ನಡೆಸಿದ್ದು, ನಾಲ್ವರು ಅತೃಪ್ತ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಇಡೀ ಬೆಳವಣಿಗೆಯಿಂದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಂಪೂರ್ಣವಾಗಿ ದೂರ ಉಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಬಿಜೆಪಿ ನಾಯಕರ ಸರ್ಕಾರದ ರಚನೆ ಆಸೆಗೆ ತಣ್ಣೀರೆರಚಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments