Select Your Language

Notifications

webdunia
webdunia
webdunia
webdunia

ಕಾಂಗ್ರೆಸ್​ ಗೆ ಬಿಗ್ ಶಾಕ್ ; ಎಂಎಲ್​ಸಿ ಲಿಂಗಪ್ಪ ಮಗ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್​ ಗೆ ಬಿಗ್ ಶಾಕ್ ; ಎಂಎಲ್​ಸಿ ಲಿಂಗಪ್ಪ ಮಗ  ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆ
ರಾಮನಗರ , ಗುರುವಾರ, 11 ಅಕ್ಟೋಬರ್ 2018 (13:26 IST)
ರಾಮನಗರ : ರಾಮನಗರದ ಕಾಂಗ್ರೆಸ್​ ಎಂಎಲ್​ಸಿ ಲಿಂಗಪ್ಪ ಅವರ  ಮಗ  ಚಂದ್ರಶೇಖರ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಚಂದ್ರಶೇಖರ್,’ನನಗೆ ರಾಮನಗರದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರ ಭಯ ಇಲ್ಲ, ಡಿಕೆಶಿ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರ, ಚನ್ನಪಟ್ಟಣ, ಮಾಗಡಿಯಲ್ಲಿ ಅವರು ಪ್ರಾಭಾವಿ ಸಚಿವರಾಗಿದ್ದರೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಕಳೆದ 28 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೇವೆ ಸಲ್ಲಿಸಿದ್ದೆ. ಆದರೆ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮಾಡಿಕೊಂಡಿರುವ ಒಳಒಪ್ಪಂದದಿಂದ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಅದ್ದರಿಂದ ನಾನು ಕಾರ್ಯಕರ್ತರ ಒತ್ತಡ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಡವೆಂದರೂ ಸಮುದ್ರಕ್ಕಿಳಿದು ಅಲೆಯ ರಭಸಕ್ಕೆ ಪಂಚೆ ಜಾರಿಸಿಕೊಂಡ ಬೈಂದೂರು ಶಾಸಕ