Publish Date: Mon, 16 Dec 2019 (14:13 IST)
Updated Date: Mon, 16 Dec 2019 (14:15 IST)
ಉಪ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿರೋ ಸಿಎಂಗೆ ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡೋದಾಗಿ ಹೇಳೋ ಮೂಲಕ ಶಾಕ್ ನೀಡಿದ್ದಾರೆ.
ಪಕ್ಷವು ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೊಬ್ಬರಿಗೆ ಅವಕಾಶ ನೀಡಲು ನೆರವಾಗುವೆ. ಹೀಗಂತ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ತುಮಕುರಿನ ಸಿದ್ಧಗಂಗಾ ಮಠದಲ್ಲಿ ಮಾತನಾಡಿದ ಅವರು, ಪಕ್ಷ ಹೇಳಿದರೆ ಖಂಡಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ ಅಂತ ಹೇಳಿದ್ದಾರೆ.
ಇನ್ನು ಡಿಸಿಎಂ ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡೋದು ಸಿಎಂಗೆ ಬಿಟ್ಟ ವಿಚಾರ ಅಂತಾನೂ ಹೇಳಿದ್ರು.