Select Your Language

Notifications

webdunia
webdunia
webdunia
webdunia

ಇಂದು ವಿಶ್ವಾಸ ಮತಯಾಚಿಸಲು ಮುಂದಾದ ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್

ಇಂದು ವಿಶ್ವಾಸ ಮತಯಾಚಿಸಲು ಮುಂದಾದ ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್
ಬೆಂಗಳೂರು , ಗುರುವಾರ, 18 ಜುಲೈ 2019 (13:29 IST)
ಬೆಂಗಳೂರು : ಇಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚಿಸಲು ಮುಂದಾಗಿದ್ದರೆ  ಇತ್ತ ಕಡೆ ರೆಸಾರ್ಟ್ ನಲ್ಲಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾತ್ರೋರಾತ್ರಿ ನಾಪತ್ತೆಯಾಗಿ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.




ಇಂದಿನ ಅಧಿವೇಶನದಲ್ಲಿ ಸಿಎಂ ಕುಮಾರ ಸ್ವಾಮಿ ವಿಶ್ವಾಸ ಮತಯಾಚಿಸುವುದರ ಮೂಲಕ ಮೈತ್ರಿ ಸರ್ಕಾರವನ್ನು ಉಳಿಸಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಇದೀಗ ಕಳೆದ ರಾತ್ರಿ  ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ದೇವನಹಳ್ಳಿಯ ಪ್ರಕೃತಿ ರೆಸಾರ್ಟಿನಿಂದ ಹೊರಗೆ ಹೋಗಿದ್ದಾರೆ.


ಹಾಗೇ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಅನಾರೋಗ್ಯದ ಕಾರಣ ನಾಯಕರ ಅನುಮತಿ ಪಡೆದು ಮನೆಗೆ ಬಂದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


 

Share this Story:

Follow Webdunia kannada

ಮುಂದಿನ ಸುದ್ದಿ

ರಾಮಲಿಂಗಾ ರೆಡ್ಡಿ ಮನವೊಲಿಸುವ ಕಾರ್ಯದಲ್ಲಿ ಯಶಸ್ಸು ಸಾಧಿಸಿದ ಮೈತ್ರಿ ನಾಯಕರು