Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ಬಿಗ್ ಟ್ವಿಸ್ಟ್!

Webdunia
ಶುಕ್ರವಾರ, 28 ಜುಲೈ 2017 (10:49 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಮತ್ತು ಶಶಿಕಲಾ ನಟರಾಜನ್ ರಿಂದ ಲಂಚ ಪಡೆದಿದ್ದಾರೆಂದು ಕಾರಾಗೃಹ ಇಲಾಖೆ ಡಿಜಿಪಿ ವಿರುದ್ಧ ಆರೋಪ ಮಾಡಿ ವರದಿ ನೀಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಸಂಕಷ್ಟ ಎದುರಾಗಿದೆ.


ಇನ್ನು ನಾಲ್ಕು ದಿನಗಳಲ್ಲಿ ನಿವೃತ್ತರಾಗಲಿರುವ ಡಿಜಿಪಿ ಸತ್ಯನಾರಾಯಣ ರಾವ್ ರೂಪಾ ಬೇಷರತ್ ಕ್ಷಮೆಗೆ ಆಗ್ರಹಿಸಿದ್ದು, ತಪ್ಪಿದಲ್ಲಿ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ. ಇನ್ನೊಂದೆಡೆ ಶಶಿಕಲಾ ನಟರಾಜನ್ ಗೆ ನೀಡುತ್ತಿದ್ದ ವಿಐಪಿ ಸೌಲಭ್ಯ ನಿಯಮ ಬಾಹಿರವಾಗಿರಲಿಲ್ಲ ಎಂದು ಸತ್ಯನಾರಾಯಣ ರಾವ್ ಸ್ಪಷ್ಟಪಡಿಸಿದ್ದಾರೆ.

2017 ರ ಫೆಬ್ರವರಿಯಲ್ಲಿ 36 ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶದಂತೆ ಶಶಿಕಲಾಗೆ ಎ ದರ್ಜೆಯ ಸೌಲಭ್ಯ ನೀಡಲಾಗಿದೆ. ಅದರಂತೆ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆಯೇ ಹೊರತು ನಿಯಮಬಾಹಿರವಾಗಿ ನಡೆದುಕೊಂಡಿಲ್ಲ ಎಂದು ಸತ್ಯನಾರಾಯಣ ರಾವ್ ಸ್ಪಷ್ಟಪಡಿಸಿದ್ದಾರೆ. ವಿಐಪಿ ಖೈದಿಯಾದ ಕಾರಣ, ಆಕೆಯ ಭದ್ರತೆಗೆ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದಿದ್ದಾರೆ.

ಇತ್ತ ಕಾರಾಗೃಹದ ಅಕ್ರಮಗಳ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ತಂಡ ಕೂಡಾ ರೂಪಾ ವರದಿಯಲ್ಲಿರುವ ಆರೋಪಗಳಿಗೆ ಹುರುಳಿಲ್ಲ ಎಂದಿತ್ತು. ಅಲ್ಲದೆ, ರೂಪಾ ವರದಿಯಲ್ಲಿ ಲೋಪ ದೋಷಗಳಿವೆ ಎಂದಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಡಿ.ರೂಪಾ ಸಂಷ್ಟಕ್ಕೀಡಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ..  ಅಹಹಾ… ದೀಪಿಕಾ ಚುಂಬನ!.. ಬಾಯಿ ಚಪ್ಪರಿಸಿಕೊಂಡ ರಣವೀರ್ ಸಿಂಗ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments