Webdunia - Bharat's app for daily news and videos

Install App

ಬಿಗ್ ಬಾಸ್ ಸ್ಪರ್ಧಿ ,ಗಾಯಕ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಕಿರಿಕ್

Webdunia
ಗುರುವಾರ, 6 ಅಕ್ಟೋಬರ್ 2022 (21:05 IST)
ಬಿಗ್ ಬಾಸ್ ಸ್ಪರ್ಧಿ, ಗಾಯಕ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಕಿರಿಕ್ ನಡೆದಿದೆ.ಊರ್ವಶಿ ಥಿಯೇಟರ್ ನಲ್ಲಿ ಸೀಟ್ ನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ದೊಡ್ಡ ಗಲಾಟೆಯೇ ನಡೆದಿದ್ದು,ನಾಲ್ಕೈದು ಮಂದಿಯಿಂದ ವಾಸುಕಿ ಆ್ಯಂಡ್ ಫ್ರೆಂಡ್ಸ್ ಜೊತೆ ಕಿರಿಕ್ ಮಾಡಿರುವ ಆರೋಪ  ಕೇಳಿಬಂದಿದೆ.ಇನ್ನೂ ಈ ಘಟನೆ ಅಕ್ಟೋಬರ್ 3ರ ಸಂಜೆ ಊರ್ವಶಿ ಥಿಯೇಟರ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
 
ಅಕ್ಟೋಬರ್ 3ರ ಮಧ್ಯಾಹ್ನ ವಾಸುಕಿ, ಅವರ ಸ್ನೇಹಿತ ದರ್ಶನ್ ಗೌಡ,ಗೆಳತಿ ಜೊತೆ ಫಿಲಂ ನೋಡಲು ಹೋಗಿದ್ರು.ಊರ್ವಶಿ ಚಿತ್ರಮಂದಿರದಲ್ಲಿ ಕಾಂತಾರ ಫಿಲಂ ನೋಡಲು ಹೋಗಿದ್ರು.ಟಿಕೆಟ್ ತೆಗೆದುಕೊಂಡು ಮೊದಲೇ ಸೀಟ್ ನಲ್ಲಿ  ವಾಸುಕಿ ವೈಭವ್ ಹಾಗೂ ಸ್ನೇಹಿತರು ಕುಳಿತ್ತಿದ್ರು.ಈ ವೇಳೆ ವಾಸುಕಿ ಕುಳಿತಿದ್ದ ಸೀಟ್ ಮುಂದೆ ಕೂರಲು ಬಂದ ನಾಲ್ಕೈದು ಮಂದಿ ಗುಂಪು.ಆಗ ಬೇಗ ಹೋಗುವಂತೆ  ವಾಸುಕಿ ಸ್ನೇಹಿತ ದರ್ಶನ್ ಗೌಡ ಹಾಗೂ ಅವರ ಗೆಳತಿ ಹೇಳಿದ್ದಾರೆ.ಇದರಿಂದ ಕುಪಿತರಾದ ಮುರುಳಿ, ಬಸವರಾಜ್ ಹಾಗೂ ಸ್ನೇಹಿತರಿಂದ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ.
 
ವಾಸುಕಿ ಹಾಗೂ ಗೆಳತಿಗೆ ಅಸಭ್ಯ ಪದ ಬಳಸಿ ನಿಂದನೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.ಈ ವೇಳೆ ತಿರುಗಿಸಿ ಬೈದಿದ್ದ ದರ್ಶನ್ ಗೌಡ ಹಾಗೂ ಆತನ ಗೆಳತಿ ಸುಮ್ಮನಾಗದೇ ಎದುರಾಳಿ ಗುಂಪಿನವರಿಂದ ಇಂಟರವಲ್ ನಲ್ಲಿ ಮತ್ತೆ ಕಿರಿಕ್ ಮಾಡಿದ್ದಾರೆ. ಎದುರಾಳಿ ಗುಂಪಿನಲ್ಲಿದ್ದ ಬಸವರಾಜ್, ಮುರುಳಿ ಮತ್ತಿತರರ ವಿರುದ್ಧ ಕಲಾಸಿಪಾಳ್ಯ ಠಾಣೆಯಲ್ಲಿ ಎನ್.ಸಿ.ಆರ್ ಕೇಸ್ ಏನು ಬೇಡ ಎಂದು ಹೇಳಿದ್ದ ಗಾಯಕ ವಾಸುಕಿ ವೈಭವ್ ಹಾಗೂ ಸ್ನೇಹಿತರು ಸಾರಿ ಕೇಳಿದ್ರೆ ಸಾಕು ಅಂತಾ ವಾಸುಕಿ ವೈಭವ ಹಾಗೂ ಫ್ರೆಂಡ್ಸ್ ಹೇಳಿದ್ರು.ಹಾಗಾಗಿ‌ ವಾಸುಕಿ ವೈಭವ್ ಸ್ನೇಹಿತೆಗೆ ಕ್ಷಮೆ ಕೇಳಿದ್ದ ನಂತರವು ಗುಂಪು ಗಲಾಟೆ ಮಾಡಿದೆ.ಇಷ್ಟಕ್ಕೆ ಸುಮ್ಮನಾಗದೇ ದರ್ಶನ್ ಗೌಡ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದರು.
 
ದರ್ಶನ್ ಗೌಡ ದೂರಿನ್ವಯ ಎನ್ ಸಿಆರ್ ಮುರುಳಿ,ಬಸವರಾಜ್ ,ಇತರರ ವಿರುದ್ಧ ದಾಖಲುಮಾಡಲಾಗಿದೆ.ಕ್ಷಮೆ ಕೇಳುವುದರೊಂದಿಗೆ ಪ್ರಕರಣ ಸುಖಾಂತ್ಯವಾಗಿದೆ.ಕೆಲ ಗಂಟೆಗಳ ಕಾಲ ಸ್ಟೇಷನ್ ನಲ್ಲಿ ಇದ್ದ ಗಾಯಕ ವಾಸುಕಿ ವೈಭವ್, ನಿರ್ದೇಶಕ ಪನ್ನಾಗಭರಣ ಹಾಗೂ ಸ್ನೇಹಿತರ ನಡುವೆ ಸಂಧಾನ ಮಾಡಿ  ಕಲಾಸಿಪಾಳ್ಯ ಪೊಲೀಸರು ಕಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments