ಭೀಕರ ಅಪಘಾತ : ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು..!

Webdunia
ಶನಿವಾರ, 19 ಮಾರ್ಚ್ 2022 (12:31 IST)
ತುಮಕೂರು : ಪಾವಗಡದ ತಿರುವಿನಲ್ಲಿ ನಡೆದ ಖಾಸಗಿ ಬಸ್ನ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
 
ಇಂದು ಬೆಳಗ್ಗೆ ಖಾಸಗಿ ಬಸ್ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ನ ಟಾಪ್ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು.

ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ವೈ.ಎನ್ ಹೋಸಕೋಟೆಯ ಕಲ್ಯಾಣ (18), ಬೆಸ್ತರಹಳ್ಳಿ ನಿವಾಸದ ಶಹನವಾಜ್ (20), ಸೂಲನಾಯಕನಹಳ್ಳಿಯ ಅಮೂಲ್ಯ (17), ಅಜಿತ್ (28) ಮೃತರು. ಮೃತರೆಲ್ಲರೂ ತಿರುಮಣಿ, ಪಳವಳ್ಳಿ, ವೈ ಎನ್ ಹೊಸಕೋಟೆ ಮೂಲದವರಾಗಿದ್ದಾರೆ. ಮೃತದೇಹ ಎಲ್ಲೆಂದರಲ್ಲಿ ಬಿದ್ದಿದೆ.

ಬಸ್ನಲ್ಲಿದ್ದ ಕೆಲವು ಪ್ರಯಾಣಿಕರು ಬಸ್ ಅಡಿಗೆ ಬಿದ್ದಿದ್ದರೇ, ಇನ್ನೂ ಕೆಲವರು ಕೆರೆಗೆ ಬಿದ್ದಿದ್ದಾರೆ. ಕೆರೆಯಲ್ಲಿ ಬಿದ್ದ ಪ್ರಯಾಣಿಕರು ಮೇಲೆ ಬರುತ್ತಿದ್ದಾರೆ. ಈಗಾಗಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾತನಾಡಿ, 8 ಜನರು ಸಾವನ್ನಪ್ಪಿದ್ದಾರೆ. 4 ಮೃತ ದೇಹಗಳ ರವಾನೆ ಆಗಿದೆ. ಸಾಕಷ್ಟು ಜನರಿಗೆ ಗಂಭೀರ ಗಾಯ ಆಗಿದೆ. ಅತಿಯಾದ ಸ್ಪೀಡ್ನಿಂದ ಘಟನೆ ಆಗಿದೆ. ಸ್ಥಳೀಯವಾಗಿ ಎಲ್ಲಾ ತುರ್ತು ಆರೋಗ್ಯ ಸೇವೆ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments