Select Your Language

Notifications

webdunia
webdunia
webdunia
webdunia

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಬಿಡದಿ ಮೈನರ್ ಡೆತ್ ಕೇಸ್

Sampriya

ರಾಮನಗರ , ಸೋಮವಾರ, 19 ಮೇ 2025 (17:19 IST)
ರಾಮನಗರ: ಬಿಡದಿಯಲ್ಲಿ ಅಪ್ರಾಪ್ತ ಮೂಕ ಬಾಲಕಿ ಸಾವು ಸಂಬಂಧ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಬಾಲಕಿಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು ಎಂದು ಆರೋಪಿಸಿ ಮೃತದೇಹವನ್ನು ಇಟ್ಟು ಪ್ರತಿಭಟನೆ ಮಾಡಿದರು.

ಇದೀಗ ಸಿಕ್ಕಿ ಮಾಹಿತಿ ಪ್ರಕಾರ ರೈಲು ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಿಡದಿಯ ಹೋಬಳಿಯ ಭದ್ರಾಪುರ  ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಖುಷಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪೊಲೀಸರು ಬಾಲಕಿಯ 32 ಬಗೆಯ ಸ್ಯಾಂಪಲ್ಸ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಬಳಿಕ ಎಫ್‌ಎಸ್‌ಎಲ್ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ದೃಢವಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಹೆಡ್‌ ಇಂಜುರಿಯಿಂದ ಬಾಲಕಿ ಸಾವನ್ನಪ್ಪಿರುವುದಾಗಿ ದೃಢವಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಬಾಲಕಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಅಲ್ಲದೇ ರೈಲು ಡಿಕ್ಕಿಯಾಗಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ