Webdunia - Bharat's app for daily news and videos

Install App

ಗೂಗಲ್ ಮ್ಯಾಪ್ ನಂಬಿ ಗೋವಾಕ್ಕೆಂದು ಹೊರಟವರು ಭೀಮಘಡ ದಟ್ಟ ಕಾಡಿನಲ್ಲಿ ಸಿಕ್ಕಿಹಾಕಿಕೊಂಡರು

Krishnaveni K
ಭಾನುವಾರ, 8 ಡಿಸೆಂಬರ್ 2024 (14:56 IST)
Photo Credit: X
ಬೆಳಗಾವಿ: ಇತ್ತೀಚೆಗಿನ ದಿನಗಳಲ್ಲಿ ಜನ ಎಲ್ಲೇ ಹೋಗಬೇಕಿದ್ದರೂ ಗೂಗಲ್ ಮ್ಯಾಪ್ ಬಳಸಿ ಹೋಗುವುದು ಸಾಮಾನ್ಯ. ಆದರೆ ಇದೇ ಕೆಲವೊಮ್ಮೆ ಎಡವಟ್ಟಿಗೆ ಕಾರಣವಾಗುತ್ತದೆ. ಅಂತಹದ್ದೇ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಿಹಾರ ಮೂಲದ ರಂಜಿತ್ ದಾಸ್ ಮತ್ತು ಕುಟುಂಬ ಕಾರು ಮೂಲಕ ಗೋವಾಕ್ಕೆ ಹೊರಟಿದ್ದರು. ದಾರಿ ತಿಳಿಯಲು ಗೂಗಲ್ ಮ್ಯಾಪ್ ಆನ್ ಮಾಡಿಕೊಂಡಿದ್ದರು. ಗೂಗಲ್ ಮ್ಯಾಪ್ ನ ಸಲಹೆಯಂತೇ ತೆರಳುತ್ತಿದ್ದ ರಂಜಿತ್ ದಾಸ್ ಮತ್ತು ಕುಟುಂಬ ಬೆಳಗಾವಿ ಜಿಲ್ಲೆಯ ಭೀಮಘಡ ದಟ್ಟ ಅರಣ್ಯ ಪ್ರದೇಶಕ್ಕೆ ಬಂದು ತಲುಪಿತ್ತು.

ಇದು ತಿಳಿಯುವಷ್ಟರಲ್ಲಿ ಅವರು ದಟ್ಟ ಕಾಡಿನೊಳಗೆ ಸುಮಾರು 6 ರಿಂದ 7 ಕಿ.ಮೀ. ದೂರ ಬಂದಾಗಿತ್ತು. ಅದೂ ಮಧ್ಯರಾತ್ರಿ ಬೇರೆ. ಎತ್ತ ಹೋಗಬೇಕೆಂದು ತಿಳಿಯದೇ ಯಾರನ್ನಾದರೂ ಕರೆಯೋಣವೆಂದರೆ ಮೊಬೈಲ್ ನೆಟ್ ವರ್ಕ್ ಇರಲಿಲ್ಲ. ಅನಿವಾರ್ಯವಾಗಿ ರಂಜಿತ್ ದಾಸ್ ಮತ್ತು ಕುಟುಂಬ ತಮ್ಮ ಕಾರಿನಲ್ಲೇ ಆ ದಟ್ಟ ಕಾಡಿನ ನಡುವೆ ಜೀವ ಕೈಯಲ್ಲಿ ಹಿಡಿದುಕೊಂಡು ರಾತ್ರಿ ಕಳೆಯುವಂತಾಯಿತು.

ಮರುದಿನ ಬೆಳಿಗ್ಗೆಯಾಗುತ್ತಿದ್ದಂತೇ ಸುಮಾರು 4 ಕಿ.ಮೀ. ದೂರ ನಡೆದ ರಂಜಿತ್ ದಾಸ್ ಮೊಬೈಲ್ ನೆಟ್ ವರ್ಕ್ ಬರುವ ಸ್ಥಳ ತಿಳಿದುಕೊಂಡು ಅಲ್ಲಿಂದ ಪೊಲೀಸರಿಗೆ ಸಹಾಯಕ್ಕಾಗಿ ಕರೆ ಮಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಕುಟುಂಬದವರನ್ನು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments