Select Your Language

Notifications

webdunia
webdunia
webdunia
webdunia

ಬೈಕ್ ಅಪಘಾತ: ಮಾನವೀಯತೆ ಮೆರೆದ ಡಿ.ವಿ.ಸದಾನಂದ ಗೌಡ

ಬೈಕ್ ಅಪಘಾತ
ಬೆಂಗಳೂರು , ಶನಿವಾರ, 2 ಜುಲೈ 2016 (11:16 IST)
ಬೈಕ್ ಅಪಘಾತದ ಗಾಯಾಳುಗಳಿಗೆ ನೆರವಾಗುವ ಮೂಲಕ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ.
 
ಇಂದು ಮುಂಜಾನೆ ಬೆಂಗಳೂರಿನ ಸಂಜಯ್ ನಗರದಲ್ಲಿ ಬೈಕ್ ಅಪಘಾತ ನಡೆದಿತ್ತು. ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಕಾರ್‌ನ್ನು ನಿಲ್ಲಿಸಿ, ತಮ್ಮ ಕಾರ್‌ನಲ್ಲಿದ್ದ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಅವರನ್ನು ಆಸ್ಪತ್ರೆಗೆ ಸೇರಿಸಲು ಸಹ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.
 
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಮಾನವೀಯತೆ ದೃಷ್ಟಿಯಿಂದ ನೆರವಾಗಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮ್ಸ್‌ಗೆ ಸಚಿವ ಸಂತೋಷ್ ಲಾಡ್ ಭೇಟಿ: ಅವ್ಯವಸ್ಥೆ ನೋಡಿ ಅಧಿಕಾರಿಗಳಿಗೆ ತರಾಟೆ