Publish Date: Thu, 21 Jul 2022 (16:11 IST)
Updated Date: Thu, 21 Jul 2022 (16:14 IST)
ಬೈಕ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಣಿಗಲ್ ರಸ್ತೆಯ ನಾಗವಲ್ಲಿ ಬಳಿ ನಡೆದಿದೆ. ಹೆಬ್ಬೂರು ಕಡೆಯಿಂದ ತುಮಕೂರು ಕಡೆಗೆ ಬರ್ತಿದ್ದ ಬೈಕ್ ಹಾಗೂ ತುಮಕೂರು ಕಡೆಯಿಂದ ಬರ್ತಿದ್ದ ಲಾರಿ ಮುಖಾಮುಖಿಯಾಗಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಉಸಿರು ಚಲ್ಲಿದ್ದಾನೆ. ಮೃತದೇಹವನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ