Webdunia - Bharat's app for daily news and videos

Install App

ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ

Webdunia
ಭಾನುವಾರ, 28 ನವೆಂಬರ್ 2021 (21:12 IST)
ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಿಗೇಹಳ್ಳಿ ವೃತ್ತದ ಬಳಿ ಭಾನುವಾರ ನಡೆದಿದೆ. 
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದೊಡ್ಡಬಳ್ಳಾಪುರದ ಹರಳುಮಲ್ಲಿಗೆಯ ಕಿರಣ್ (26) ಮೃತಪಟ್ಟವರು. 
ಕೊಡಿಗೇಹಳ್ಳಿ ಜಂಕ್ಷನ್ ಕಡೆಯಿಂದ ಬ್ಯಾಟರಾಯನಪುರ ಕಡೆಗೆ ಹೋಗಲು ಬಳ್ಳಾರಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಸ್ವಾತಿ ಹೋಟೆಲ್ ಮುಂಭಾಗ ಹಿಂದಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಬಸ್ ಚಕ್ರ ಹರಿದು ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. 
ಸ್ಥಳಕ್ಕೆ ದೌಡಾಯಿಸಿದ ಹೆಬ್ಬಾಳ ಸಂಚಾರ ಠಾಣೆ ಪೆÇಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಚಾಲಕ ಹಾಗೂ ನಿರ್ವಾಹಕನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಡಿಸಿಪಿ ಸವಿತಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments