Select Your Language

Notifications

webdunia
webdunia
webdunia
webdunia

ಬೈಕ್ ಮುಗುಚಿ ಆಳ ತಗ್ಗಿಗೆ ಬಿತ್ತು: ಮುಂದೇನಾಯ್ತು?

ಬೈಕ್
ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಿನ್ನಲೆ ಅಮಾಯಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಬೈಕ್ ಮುಗುಚಿ ಆಳ ತಗ್ಗಿಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಬೈಕ್ ಮುಗುಚಿ ಬೃಹತ್‌ ತಗ್ಗಿಗೆ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಿಕ್ಕಮಾಗನೂರು ಬಳಿ ಘಟನೆ ನಡೆದಿದೆ. ಜಮಾಲಸಾಬ್ ಮುಜಾವರ್ (50)ಮೃತ ದುರ್ದೈವಿ.

ಮೃತನು ದಾವಣಗೇರಿ ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ನಿವಾಸಿಯಾಗಿದ್ದಾನೆ. ಅಪ್ಪರ್ ತುಂಗಾ ಕಾಲವೆಗಾಗಿ ಗುಂಡಿ ತೊಡಿದ್ದ ಅಧಿಕಾರಿಗಳ ಕ್ರಮದಿಂದಾಗಿ ಸಾವನ್ನಪ್ಪುವಂತಾಗಿದೆ ಎಂದು ಜನರು ದೂರಿದ್ದಾರೆ. ಯುಟಿಪಿ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಿನ್ನಲೆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಧಿಕಾರಿಗಳ ನಿರ್ಲಕ್ಷವೆ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಸ್ಥಳದಲ್ಲಿ ಸಾರ್ವಜನಿಕರ ಮತ್ತು ರೈತ ಮುಖಂಡರ ಆಕ್ರೋಶ ಹೆಚ್ಚಾಗಿತ್ತು. ಈ ಕುರಿತು ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೋರಾಟಗಾರ ಮುನಿಸ್ವಾಮಿ: ವಿಚಾರ ಸಂಕಿರಣ ಯಶಸ್ವಿ