Webdunia - Bharat's app for daily news and videos

Install App

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

Krishnaveni K
ಮಂಗಳವಾರ, 24 ಜೂನ್ 2025 (10:20 IST)
Photo Credit: X
ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸ್ ನಿಷೇಧಿಸಿದ ಬೆನ್ನಲ್ಲೇ ಈಗ ನಮಗೂ ಕುಟುಂಬವಿದೆ, ಜೀವನವಿದೆ ದಯವಿಟ್ಟು ನಿಷೇಧ ಹಿಂತೆಗೆದುಕೊಳ್ಳಿ ಎಂದು ಬೈಕ್ ಟ್ಯಾಕ್ಸಿವಾಲಾಗಳು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ.

ಸುರಕ್ಷತೆ ದೃಷ್ಟಿಯಿಂದ ಮತ್ತು ದುರ್ಬಳಕೆಯಾಗುತ್ತಿದೆ ಎಂಬ ಉದ್ದೇಶಕ್ಕೆ ಬೈಕ್ ಟ್ಯಾಕ್ಸಿ ಸೇವೆನಯನ್ನು ಕರ್ನಾಟಕ ಸರ್ಕಾರ ಸ್ಥಗಿತಗೊಳಿಸಿದೆ. ಇದರಿಂದ ನೂರಾರು ಜನ ಕೆಲಸ ಕಳೆದುಕೊಂಡು ಪರದಾಡುವಂತಾಗಿದೆ. ಹೀಗಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಗೆ ಪತ್ರ ಬರೆದು ನಿಷೇಧ ಹಿಂತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.

ಇಂದೂ ಕೂಡಾ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಹಿಂತೆಗೆದುಕೊಳ್ಳಿ ಎಂದು ಟ್ರೆಂಡ್ ಸೃಷ್ಟಿಯಾಗಿದೆ. ಸರ್ಕಾರವೇನೋ ಒಂದು ಉದ್ದೇಶವಿಟ್ಟುಕೊಂಡು ಬೈಕ್ ಟ್ಯಾಕ್ಸಿ ನಿಷೇಧಿಸಿದೆ. ಆದರೆ ಇದನ್ನೇ ನಂಬಿಕೊಂಡು ಎಷ್ಟೋ ಜನ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಅವರ ಜೀವನ ಈಗ ಹಳ್ಳ ಹಿಡಿದಿದೆ.

ಹೀಗಾಗಿ ನಿಷೇಧ ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. ನಮಗೆ ನ್ಯಾಯ ಬೇಕು. ನಮ್ಮ ಕುಟುಂಬವನ್ನು ಬೀದಿಗೆ ತಳ್ಳಬೇಡಿ. ಕರ್ನಾಟಕದಾದ್ಯಂತ ಸುಮಾರು 5,000 ಬೈಕ್ ಟ್ಯಾಕ್ಸಿವಾಲಗಳಿದ್ದಾರೆ. ಅವರೆಲ್ಲರ ಬದುಕು ಈಗ ಅತಂತ್ರ ಸ್ಥಿತಿ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮಕ್ಕಳು ಅವಮಾನ ಮಾಡಿದ್ರು: 4 ಕೋಟಿ ಆಸ್ತಿಯನ್ನು ಈ ತಾತ ಕೊಟ್ಟಿದ್ದು ಯಾರಿಗೆ ಗೊತ್ತಾ

ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

ಅಬ್ಬಾ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನಿಸುತ್ತದೆ: ಚಿರತೆ ಜತೆ ವ್ಯಕ್ತಿಯ ಒಂಟಿ ಹೋರಾಟ

ಮುಂದಿನ ಸುದ್ದಿ
Show comments