Webdunia - Bharat's app for daily news and videos

Install App

ಹೈವೋಲ್ಟೇಜ್ ಕದನವಾದ ಬೈಎಲೆಕ್ಷನ್: ಜಾಧವ್ ವಿರುದ್ಧ ದೂರು

Webdunia
ಭಾನುವಾರ, 5 ಮೇ 2019 (18:10 IST)
ಉಪ ಚುನಾವಣೆಯನ್ನ ಬಿಜೆಪಿ-ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರುವ ನಡುವೆಯೇ ದೂರು, ಪ್ರತಿದೂರುಗಳು ದಾಖಲಾಗುತ್ತಿವೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ.

ಹೀಗಂತ ಆರೋಪಿಸಿರುವ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಪರವಾನಗಿ ಇಲ್ಲದೆ ಸಭೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಮೇ 4 ರಂದು ಚಿಂಚೋಳಿಯ ಸೋನಾಲಗಿರಿ ಪಂಗರಗ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಪರವಾನಿಗೆ ಪಡೆದುಕೊಂಡಿರಲಿಲ್ಲ. ಶ್ರೀ ಪರ್ವತಲಿಂಗ ಪರಮೇಶ್ವರ ಮಾಹಾರಾಜರ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹೆಸರಲ್ಲಿ ಪರವಾನಗಿ ಪಡೆಯದೆ ಬಿಜೆಪಿ ಸಭೆ ನಡೆದಿದೆ.  

ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಲಾಗಿದೆ.
ಸಭೆಯಲ್ಲಿ ಸಂಸದ ಭಗವಂತ ಖೂಬಾ, ಉಮೇಶ ಜಾಧವ್, ಶಾಸಕ ಅಶ್ವಥ್ ನಾರಾಯಣ ಮತ್ತಿತರರು ಭಾಗಿಯಾಗಿದ್ರು.

ಸೋನಾಲಗಿರಿ ಮಠವನ್ನು ರಾಜಕೀಯ ಕ್ಕೆ ಬಳಸಿಕೊಳ್ಳಲಾಗುತ್ತಿದೆ. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿಂದ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments