Webdunia - Bharat's app for daily news and videos

Install App

ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ:ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲು

Webdunia
ಸೋಮವಾರ, 13 ಡಿಸೆಂಬರ್ 2021 (19:55 IST)
ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಓರ್ವ ಬೆಂಗಳೂರು, ಇನ್ನೋರ್ವ ಕಾರ್ಕಳ ಹಾಗೂ ಮತ್ತೋರ್ವ ಮಂಗಳೂರು ಮೂಲದವರು. ಫೇಸ್‌ಬುಕ್ ಖಾತೆಗಳು ಅಸಲಿಯೇ ಅಥವಾ ನಕಲಿಯೆ? ಎಲ್ಲಿಂದ ಈ ಖಾತೆಗಳನ್ನು ತೆರೆಯಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಸಂತ್ ಕುಮಾರ್ ಟಿ.ಕೆ ಎಂಬ ಫೇಸ್‌ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಎಂಬ ಹೆಸರಿನ ಫೇಸ್‌ಬುಕ್‌ಖಾತೆಯಿಂದ ಜನರಲ್ ಬಿಪಿನ್ ರಾವತ್ ಅವರ ಕುರಿತು ಹಾಗೂ ಶ್ರೀನಿವಾಸ ಕಾರ್ಕಳ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.ಆರೋಪಿಗಳು ಜಾಲತಾಣಗಳಲ್ಲಿ ಬಿಪಿನ್ ರಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಸಾಕಷ್ಟು ಪ್ರಚೋದನಕಾರಿ ಪೋಸ್ಟ್ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಸುಶಾಂತ್ ಎಂಬವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.
ಅವಮಾನ ಮಾಡುವಂತಹ ಹೇಳಿಕೆಗಳು ಜನಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಅಪಾಯದ ಭೀತಿಯನ್ನು ಹುಟ್ಟಿಸುವ ಉದ್ದೇಶವಿದೆ. ಆರೋಪಿಗಳನ್ನು ಶೀಘ್ರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments