Webdunia - Bharat's app for daily news and videos

Install App

Bird Flue: ಚಿಕನ್ ಪ್ರಿಯರಿಗೆ ಪಶುಸಂಗೋಪನಾ ಇಲಾಖೆಯ ಗೈಡ್ ಲೈನ್ಸ್ ಇಲ್ಲಿದೆ

Krishnaveni K
ಸೋಮವಾರ, 3 ಮಾರ್ಚ್ 2025 (12:16 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹಕ್ಕಿ ಜ್ವರ ಭೀತಿ ಕಾಣಿಸಿಕೊಂಡಿದ್ದು, ಚಿಕನ್ ಪ್ರಿಯರಿಗೆ ಪಶುಸಂಗೋಪನಾ ಇಲಾಖೆ ಕೆಲವು ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಇಲ್ಲಿದೆ ವಿವರ.

ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ ಮುಂತಾದ ಗಡಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಸಾಕಷ್ಟು ಕೋಳಿಗಳ ಮಾರಣ ಹೋಮ ನಡೆಸಲಾಗಿದೆ. ಹಕ್ಕಿ ಜ್ವರ ಹಿನ್ನಲೆಯಲ್ಲಿ ಜನ ಚಿಕನ್ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ಹೀಗಾಗಿ ಈಗ ಸುರಕ್ಷಿತವಾಗಿ ಚಿಕನ್ ಸೇವನೆ ಮಾಡಲು ಏನು ಮಾಡಬೇಕು ಎಂಬ ಬಗ್ಗೆ ಪಶುಸಂಗೋಪನಾ ಇಲಾಖೆ ಕೆಲವು ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಅವುಗಳ ವಿವರ ಇಲ್ಲಿದೆ ನೋಡಿ.

-ಕೋಳಿ ಮಾಂಸ ಅಡುಗೆಗೆ ಬಳಸುವ ಮುನ್ನ ಕೆಲವು ಮುಂಜಾಗ್ರತಾ ಕ್ರಮ ವಹಿಸಬೇಕು.
-ಅಡುಗೆಗಾಗಿ ಕೋಳಿಮಾಂಸವನ್ನು ತಯಾರಿಸಿದ ಬಳಿಕ ಕೈಗಳನ್ನು ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು
-70 ಡಿಗ್ರಿ ಸೆಂಟಿ ಗ್ರೇಡ್ ಗಿಂತ ಅಧಿಕ ಉಷ್ಣಾಂಶದಲ್ಲಿ ಕೋಳಿ ಮಾಂಸವನ್ನು ಸುಮಾರು 30 ನಿಮಿಷ ಬೇಯಿಸಿ ತಿನ್ನಬಹುದು.
-ಅಧಿಕ ಉಷ್ಣಾಂಶದಲ್ಲಿ ಬೇಯಿಸಿದಾಗಿ ವೈರಾಣುಗಳು ಉಳಿಯುವುದಿಲ್ಲ.
-ಹಸಿ ಕೋಳಿಮಾಂಸ ಅಥವಾ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಕ್ಕೆ ಸೋಕದಂತೆ ಎಚ್ಚರಿಕೆ ವಹಿಸಬೇಕು.
-ಬೇಯಿಸದ ಮೊಟ್ಟೆ, ಕೋಳಿ ಮಾಂಸವನ್ನು ಸೇವಿಸಬಾರದು.
-ಅನಗತ್ಯವಾಗಿ ಕೋಳಿ ಫಾರಂಗಳಿಗೆ ಭೇಟಿ ನೀಡಬೇಡಿ
-ಕೋಳಿ ಫಾರಂನಲ್ಲಿ ಕೆಲಸ ಮಾಡುವವರು ಆಗಾಗ ನಂಜುನಾಶಕ ದ್ರಾವಣದಿಂದ ತೊಳೆಯುತ್ತಿರಬೇಕು.
-ಕೋಳಿ ಪಂಜರಗಳನ್ನು ಪ್ರತಿನಿತ್ಯ ಶುಚಿಗೊಳಿಸಿ, ನೀರು, ಆಹಾರ ಬದಲಾಯಿಸುತ್ತಿರಬೇಕು.
-ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಸಂಪರ್ಕಕ್ಕೆ ಬರದಂತೆ ಎಚ್ಚರಿಕೆ ವಹಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments