Webdunia - Bharat's app for daily news and videos

Install App

ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಪ್ರಕರಣ

Webdunia
ಬುಧವಾರ, 17 ನವೆಂಬರ್ 2021 (21:44 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಪ್ರಕರಣ ಸಂಬಂಧ ಹ್ಯಾಕರ್ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಗೆ ಜೀವ ಬೆದರಿಕೆ ಸಂಬಂಧ ಭದ್ರತೆ ನೀಡಲು ಮುಂದಾಗಿದ್ದರೂ ಶ್ರೀಕಿ ಮಾತ್ರ ತಲೆಮರೆಸಿಕೊಂಡಿರುವುದು ಪೊಲೀಸರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಶ್ರೀಕಿಗೆ ಜೀವ ಬೆದರಿಕೆಯಿದೆ. ಪೊಲೀಸರು ಭದ್ರತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು‌. ಈ ಸಂಬಂಧ ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್ ಸೂಚನೆಯ ಮೇರೆಗೆ ಸಬ್​ಇನ್​ಸ್ಪೆಕ್ಟರ್ ಒಬ್ಬರನ್ನು ಶ್ರೀಕಿ ಭದ್ರತೆಗೆ ನಿಯೋಜಿಸಲಾಗಿದೆ‌. ಭದ್ರತೆ ನೀಡಲೆಂದು ಶ್ರೀಕಿ ಮನೆಯವರನ್ನು ಸಂಪರ್ಕಿಸಿದರೂ ಶ್ರೀಕೃಷ್ಣ ಅಜ್ಞಾತ ಸ್ಥಳದಲ್ಲಿದ್ದಾನೆ‌. ಶ್ರೀಕಿ ಎಲ್ಲಿದ್ದಾನೆ ಎಂಬುದು ನಮಗೂ ಗೊತ್ತಿಲ್ಲ. ಮನೆಯಿಂದ ಹೊರಗೆ ಹೋಗಿರುವ ಶ್ರೀಕಿ ಮರಳಿ ಬಂದಿಲ್ಲ. ಮೊಬೈಲ್ ಕೂಡ ಬಳಸುತ್ತಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದರಿಂದ ಭದ್ರತೆ ಒದಗಿಸಲು ಪೊಲೀಸರು ಪರದಾಡುವಂತಾಗಿದೆ.
ಮತ್ತೊಂದಡೆ ಶ್ರೀಕಿಯಿಂದ ವಶಪಡಿಸಿಕೊಂಡಿದ್ದ ಲ್ಯಾಪ್​ಟಾಪ್​ನಿಂದ 76 ಲಕ್ಷ ಕೀ ವರ್ಡ್​ಗಳನ್ನು ವಿಧಿವಿಜ್ಞಾನ ಆಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಶ್ರೀಕಿ ಕ್ಲೌಡ್ ಅಕೌಂಟ್​ನಲ್ಲಿ 27 ಈ ವ್ಯಾಲೆಟ್, ಪ್ರೈವೇಟ್ ಕೀ ಹಾಗೂ ವಿಳಾಸಗಳು ಪತ್ತೆಯಾಗಿವೆ ಎಂದು ಸೈಬರ್ ಐಡಿ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಬಹಿರಂಗಪಡಿಸಿದೆ.
ಶ್ರೀಕಿಯಾ ಅಮೆಜಾನ್ ವೆಬ್ ಸರ್ವಿಸ್ ಖಾತೆ ಸೇರಿದಂತೆ ಕ್ಲೌಡ್ ಅಕೌಂಟ್ ವಿಶ್ಲೇಷಣೆ ನಡೆಸುತ್ತಿದೆ. ತನಿಖಾಧಿಕಾರಿಗಳ ಹಾದಿ ತಪ್ಪಿಸಲು ಶ್ರೀಕಿ ಬಿಟ್ ಕಾಯಿನ್ ಕೋರ್ ತಂತ್ರಾಂಶವನ್ನೇ ಹ್ಯಾಕ್ ಮಾಡಿ ತಿರುಚಿರುವ ಶಂಕೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಮುಂದಿನ ಸುದ್ದಿ
Show comments