Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್
bangalore , ಭಾನುವಾರ, 7 ನವೆಂಬರ್ 2021 (20:20 IST)
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್​ ಕಾಯಿನ್​ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ 5 ಸ್ಟಾರ್​ ಹೋಟೆಲ್​ನಲ್ಲಿ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಕಿ ತಂಗಿದ್ದ ಹೋಟೆಲ್​ನಲ್ಲಿ  ವಿಷ್ಣು ಭಟ್ ಎಂಬಾತ ಆರೋಪಿ ಶ್ರೀಕಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಜೀವನ್​ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಶ್ರೀಕಿ, ಗಲಾಟೆ ಮಾಡಿದ್ದ ವಿಷ್ಣು ಭಟ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಬಿಟ್​ ಕಾಯಿನ್​ ವಿಚಾರದಲ್ಲಿ ಬೇಕಾಗಿದ್ದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಶ್ರೀಕಿ ಎಲ್ಲಿದ್ದಾನೆ ಎಂದು ಯಾರಿಗೂ ಗೊತ್ತಿರಲಿಲ್ಲ. ಆದರೆ, ಇದೀಗ ಪ್ರಕರಣ ಮತ್ತೆ ಹೊಸ ತಿರುವು ಪಡೆದುಕೊಂಡಿದೆ. 5 ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಆರೋಪಿ ಶ್ರೀಕಿ ವಶಕ್ಕೆ ಪಡೆಯಲಾಗಿದೆ.
 
ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು  ಜೀವನ್ ಭೀಮಾನಗರ ಠಾಣೆಯಲ್ಲಿ ಶ್ರೀಕೃಷ್ಣ ವಿಚಾರಣೆ ನಡೆಸಲಾಗಿದೆ. ಡಿಸಿಪಿ ಶರಣಪ್ಪ ಶ್ರೀಕಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಶ್ರೀಕಿ ರಾಯಲ್ ಆರ್ಚಿಡ್‌ 5 ಸ್ಟಾರ್ ಹೋಟೆಲ್‌ನಲ್ಲಿದ್ದ ಎಂದು ತಿಳಿದುಬಂದಿದೆ. ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯ ಹೋಟೆಲ್ ನಲ್ಲಿ ಆತ ತಂಗಿದ್ದ. 3 ದಿನ ಹಿಂದೆ ಶ್ರೀಕಿ ಜೊತೆ ಜ್ಯುವೆಲರಿ ಗ್ರೂಪ್ಸ್‌ ಮಾಲೀಕನ ಮಗ ಇದ್ದ ಎನ್ನಲಾಗಿದೆ.
ಎಸಿಪಿ ಡಿ.ಕುಮಾರ್ ನೇತೃತ್ವದಲ್ಲಿ ಆರೋಪಿಯ ರೋಮ್ ಪರಿಶೀಲನೆ ನಡೆಸಲಾಗಿದ್ದು, ಲ್ಯಾಪ್​ಟಾಪ್, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. 
ಶನಿವಾರ ಮಧ್ಯಾಹ್ನವೂ ಹೋಟೆಲ್‌ ಸಿಬ್ಬಂದಿ ಜೊತೆ ವಿಷ್ಣುಭಟ್, ಶ್ರೀಕಿ ಗಲಾಟೆ ಮಾಡಿಕೊಂಡಿದ್ದರು. ಸೆಕ್ಯೂರಿಟಿ ಆಫೀಸರ್ ಜತೆಯೂ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕಾಲಿಕ ಮಳೆ ಪ್ರಮಾಣ ಹೆಚ್ಚಳ..!