Webdunia - Bharat's app for daily news and videos

Install App

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್

Webdunia
ಭಾನುವಾರ, 7 ನವೆಂಬರ್ 2021 (20:20 IST)
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್​ ಕಾಯಿನ್​ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ 5 ಸ್ಟಾರ್​ ಹೋಟೆಲ್​ನಲ್ಲಿ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಕಿ ತಂಗಿದ್ದ ಹೋಟೆಲ್​ನಲ್ಲಿ  ವಿಷ್ಣು ಭಟ್ ಎಂಬಾತ ಆರೋಪಿ ಶ್ರೀಕಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಜೀವನ್​ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಶ್ರೀಕಿ, ಗಲಾಟೆ ಮಾಡಿದ್ದ ವಿಷ್ಣು ಭಟ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಬಿಟ್​ ಕಾಯಿನ್​ ವಿಚಾರದಲ್ಲಿ ಬೇಕಾಗಿದ್ದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಶ್ರೀಕಿ ಎಲ್ಲಿದ್ದಾನೆ ಎಂದು ಯಾರಿಗೂ ಗೊತ್ತಿರಲಿಲ್ಲ. ಆದರೆ, ಇದೀಗ ಪ್ರಕರಣ ಮತ್ತೆ ಹೊಸ ತಿರುವು ಪಡೆದುಕೊಂಡಿದೆ. 5 ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಆರೋಪಿ ಶ್ರೀಕಿ ವಶಕ್ಕೆ ಪಡೆಯಲಾಗಿದೆ.
 
ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು  ಜೀವನ್ ಭೀಮಾನಗರ ಠಾಣೆಯಲ್ಲಿ ಶ್ರೀಕೃಷ್ಣ ವಿಚಾರಣೆ ನಡೆಸಲಾಗಿದೆ. ಡಿಸಿಪಿ ಶರಣಪ್ಪ ಶ್ರೀಕಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಶ್ರೀಕಿ ರಾಯಲ್ ಆರ್ಚಿಡ್‌ 5 ಸ್ಟಾರ್ ಹೋಟೆಲ್‌ನಲ್ಲಿದ್ದ ಎಂದು ತಿಳಿದುಬಂದಿದೆ. ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯ ಹೋಟೆಲ್ ನಲ್ಲಿ ಆತ ತಂಗಿದ್ದ. 3 ದಿನ ಹಿಂದೆ ಶ್ರೀಕಿ ಜೊತೆ ಜ್ಯುವೆಲರಿ ಗ್ರೂಪ್ಸ್‌ ಮಾಲೀಕನ ಮಗ ಇದ್ದ ಎನ್ನಲಾಗಿದೆ.
ಎಸಿಪಿ ಡಿ.ಕುಮಾರ್ ನೇತೃತ್ವದಲ್ಲಿ ಆರೋಪಿಯ ರೋಮ್ ಪರಿಶೀಲನೆ ನಡೆಸಲಾಗಿದ್ದು, ಲ್ಯಾಪ್​ಟಾಪ್, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. 
ಶನಿವಾರ ಮಧ್ಯಾಹ್ನವೂ ಹೋಟೆಲ್‌ ಸಿಬ್ಬಂದಿ ಜೊತೆ ವಿಷ್ಣುಭಟ್, ಶ್ರೀಕಿ ಗಲಾಟೆ ಮಾಡಿಕೊಂಡಿದ್ದರು. ಸೆಕ್ಯೂರಿಟಿ ಆಫೀಸರ್ ಜತೆಯೂ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments