Webdunia - Bharat's app for daily news and videos

Install App

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್

Webdunia
ಭಾನುವಾರ, 7 ನವೆಂಬರ್ 2021 (20:20 IST)
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್​ ಕಾಯಿನ್​ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ 5 ಸ್ಟಾರ್​ ಹೋಟೆಲ್​ನಲ್ಲಿ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಕಿ ತಂಗಿದ್ದ ಹೋಟೆಲ್​ನಲ್ಲಿ  ವಿಷ್ಣು ಭಟ್ ಎಂಬಾತ ಆರೋಪಿ ಶ್ರೀಕಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಜೀವನ್​ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಶ್ರೀಕಿ, ಗಲಾಟೆ ಮಾಡಿದ್ದ ವಿಷ್ಣು ಭಟ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಬಿಟ್​ ಕಾಯಿನ್​ ವಿಚಾರದಲ್ಲಿ ಬೇಕಾಗಿದ್ದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಶ್ರೀಕಿ ಎಲ್ಲಿದ್ದಾನೆ ಎಂದು ಯಾರಿಗೂ ಗೊತ್ತಿರಲಿಲ್ಲ. ಆದರೆ, ಇದೀಗ ಪ್ರಕರಣ ಮತ್ತೆ ಹೊಸ ತಿರುವು ಪಡೆದುಕೊಂಡಿದೆ. 5 ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಆರೋಪಿ ಶ್ರೀಕಿ ವಶಕ್ಕೆ ಪಡೆಯಲಾಗಿದೆ.
 
ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು  ಜೀವನ್ ಭೀಮಾನಗರ ಠಾಣೆಯಲ್ಲಿ ಶ್ರೀಕೃಷ್ಣ ವಿಚಾರಣೆ ನಡೆಸಲಾಗಿದೆ. ಡಿಸಿಪಿ ಶರಣಪ್ಪ ಶ್ರೀಕಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಶ್ರೀಕಿ ರಾಯಲ್ ಆರ್ಚಿಡ್‌ 5 ಸ್ಟಾರ್ ಹೋಟೆಲ್‌ನಲ್ಲಿದ್ದ ಎಂದು ತಿಳಿದುಬಂದಿದೆ. ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯ ಹೋಟೆಲ್ ನಲ್ಲಿ ಆತ ತಂಗಿದ್ದ. 3 ದಿನ ಹಿಂದೆ ಶ್ರೀಕಿ ಜೊತೆ ಜ್ಯುವೆಲರಿ ಗ್ರೂಪ್ಸ್‌ ಮಾಲೀಕನ ಮಗ ಇದ್ದ ಎನ್ನಲಾಗಿದೆ.
ಎಸಿಪಿ ಡಿ.ಕುಮಾರ್ ನೇತೃತ್ವದಲ್ಲಿ ಆರೋಪಿಯ ರೋಮ್ ಪರಿಶೀಲನೆ ನಡೆಸಲಾಗಿದ್ದು, ಲ್ಯಾಪ್​ಟಾಪ್, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. 
ಶನಿವಾರ ಮಧ್ಯಾಹ್ನವೂ ಹೋಟೆಲ್‌ ಸಿಬ್ಬಂದಿ ಜೊತೆ ವಿಷ್ಣುಭಟ್, ಶ್ರೀಕಿ ಗಲಾಟೆ ಮಾಡಿಕೊಂಡಿದ್ದರು. ಸೆಕ್ಯೂರಿಟಿ ಆಫೀಸರ್ ಜತೆಯೂ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments