Select Your Language

Notifications

webdunia
webdunia
webdunia
webdunia

ನಾಗಮಂಗಲ ಗಲಭೆಯಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರು: ಬಿಜೆಪಿ ಗಂಭೀರ ಆರೋಪ

Nagamangala violence

Krishnaveni K

ಮಂಡ್ಯ , ಸೋಮವಾರ, 16 ಸೆಪ್ಟಂಬರ್ 2024 (08:57 IST)
ಮಂಡ್ಯ: ಇತ್ತೀಚೆಗೆ ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ ನಡೆಸಿದವರಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಇಬ್ಬರು ಸೇರಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದವರ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದು ದಾಂಧಲೆ ನಡೆಸಿದ್ದರು. ಕೇವಲ 10 ನಿಮಿಷದಲ್ಲಿ ಇವರ ಕೈಗೆ ಪೆಟ್ರೋಲ್ ಬಾಂಬ್, ತಲ್ವಾರ್ ಹೇಗೆ ಬಂತು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡಾ ಪ್ರಶ್ನೆ ಮಾಡಿದ್ದರು.

ಪ್ರಕರಣದ ಬಗ್ಗೆ 50 ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಎಫ್ಐಆರ್ ನಲ್ಲಿ ಅಮಾಯಕರ ಹೆಸರು ಸೇರ್ಪಡೆಯಾಗಿದೆ ಎಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಚೆಲುವರಾಯಸ್ವಾಮಿ ಅಮಾಯಕರ ಹೆಸರು ಕೈ ಬಿಡಲು ಸೂಚಿಸಿದ್ದರು. ಆದರೆ ಈ ಹೆಸರುಗಳ ಪೈಕಿ ನಾಸಿರ್ ಮತ್ತು ಯೂಸಫ್ ಎಂಬವರಿದ್ದು, ಇವರು ಕೇರಳ ಮೂಲದ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದು ಬಿಜೆಪಿ ಆರೋಪಿಸಿದೆ.

ಕೇರಳದ ನಿಷೇಧಿತ ಸಂಘಟನೆಯ ಸದಸ್ಯರಿಗೆ ಕರ್ನಾಟಕದ ಮಂಡ್ಯದಲ್ಲೇನು ಕೆಲಸ? ಇದು ಪೂರ್ವನಿಯೋಜಿತ ಕೃತ್ಯ. ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ಶಾಂತಿ ಕದಡಲು ಮಾಡಿದ ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲ ಗಲಭೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹಾಕಲು ವೇದಿಕೆ ಏರಿದ ಯುವಕ ಅರೆಸ್ಟ್‌