Webdunia - Bharat's app for daily news and videos

Install App

ನಾಗಮಂಗಲ ಗಲಭೆಯಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರು: ಬಿಜೆಪಿ ಗಂಭೀರ ಆರೋಪ

Krishnaveni K
ಸೋಮವಾರ, 16 ಸೆಪ್ಟಂಬರ್ 2024 (08:57 IST)
ಮಂಡ್ಯ: ಇತ್ತೀಚೆಗೆ ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ ನಡೆಸಿದವರಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಇಬ್ಬರು ಸೇರಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದವರ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದು ದಾಂಧಲೆ ನಡೆಸಿದ್ದರು. ಕೇವಲ 10 ನಿಮಿಷದಲ್ಲಿ ಇವರ ಕೈಗೆ ಪೆಟ್ರೋಲ್ ಬಾಂಬ್, ತಲ್ವಾರ್ ಹೇಗೆ ಬಂತು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡಾ ಪ್ರಶ್ನೆ ಮಾಡಿದ್ದರು.

ಪ್ರಕರಣದ ಬಗ್ಗೆ 50 ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಎಫ್ಐಆರ್ ನಲ್ಲಿ ಅಮಾಯಕರ ಹೆಸರು ಸೇರ್ಪಡೆಯಾಗಿದೆ ಎಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಚೆಲುವರಾಯಸ್ವಾಮಿ ಅಮಾಯಕರ ಹೆಸರು ಕೈ ಬಿಡಲು ಸೂಚಿಸಿದ್ದರು. ಆದರೆ ಈ ಹೆಸರುಗಳ ಪೈಕಿ ನಾಸಿರ್ ಮತ್ತು ಯೂಸಫ್ ಎಂಬವರಿದ್ದು, ಇವರು ಕೇರಳ ಮೂಲದ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದು ಬಿಜೆಪಿ ಆರೋಪಿಸಿದೆ.

ಕೇರಳದ ನಿಷೇಧಿತ ಸಂಘಟನೆಯ ಸದಸ್ಯರಿಗೆ ಕರ್ನಾಟಕದ ಮಂಡ್ಯದಲ್ಲೇನು ಕೆಲಸ? ಇದು ಪೂರ್ವನಿಯೋಜಿತ ಕೃತ್ಯ. ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ಶಾಂತಿ ಕದಡಲು ಮಾಡಿದ ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲ ಗಲಭೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments