Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತ ಜುಬೇರ್ ಕೊಲೆ ಪ್ರಕರಣ: ಐವರ ಬಂಧನ

ಬಿಜೆಪಿ ಕಾರ್ಯಕರ್ತ ಜುಬೇರ್ ಕೊಲೆ ಪ್ರಕರಣ: ಐವರ ಬಂಧನ
ಮಂಗಳೂರು , ಗುರುವಾರ, 12 ಅಕ್ಟೋಬರ್ 2017 (09:26 IST)
ಮಂಗಳೂರು: ಬಿಜೆಪಿ ಕಾರ್ಯಕರ್ತ ಜುಬೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಸುಹೇಲ್, ನಿಜಾಮುದ್ದೀನ್, ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳು. ಹಳೆ ವೈಷಮ್ಯ ಹಿನ್ನೆಲೆ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಅ. 4ರ ಸಂಜೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ನಿಂತಿದ್ದಾಗ ನಾಲ್ವರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಜುಬೇರ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ಇನ್ನು ಮಂಗಳೂರಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಮಟ್ಟ ಹಾಕುವ ನಿಟ್ಟಿನಲ್ಲಿ ಎರಡು ತಂಡ ರಚಿಸಲಾಗಿದೆ. ಸಿಸಿಬಿ ಸೇರಿದಂತೆ ಮತ್ತೊಂದು ತಂಡವೂ ಈ ಹೊಣೆ ಹೊತ್ತಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಚಂದ್ರನನ್ನು ಭೂಮಿಗೆ ತರುತ್ತೇನೆಂದು ಮೋದಿ ನಿಮಗೆ ಮಂಕುಬೂದಿ ಎರಚಬಹುದು’