Select Your Language

Notifications

webdunia
webdunia
webdunia
webdunia

ನಟಿ ರಮ್ಯಾಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು!

ನಟಿ ರಮ್ಯಾಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು!
ಮಂಗಳೂರು , ಗುರುವಾರ, 25 ಆಗಸ್ಟ್ 2016 (18:12 IST)
ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಮೇಲೆ 25 ಕ್ಕೂ ಹೆಚ್ಚು ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ವರದಿಯಾಗಿದೆ.
 
ಖಾಸಗಿ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ನಟಿ ರಮ್ಯಾ ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳೂರು ನಗರದ ವಿಮಾನ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ರಮ್ಯಾ ದೇಶ ಬಿಟ್ಟು ತೊಲಗಲಿ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
 
ಪ್ರತಿಭಟನಾನಿರತ 25 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ರಮ್ಯಾ ಅವರನ್ನು ಬೀಗಿ ಬಂದೋಬಸ್ತ್‌ನಲ್ಲಿ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋದರು.
 
ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನ ನರಕವಿದ್ದಂತೆ ಅಂತಾ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ನಟಿ ರಮ್ಯಾ ಅವರು ಪಾಕಿಸ್ತಾನದಲ್ಲಿ ಹಾಗೇನಿಲ್ಲ. ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ಅಂತಾ ಹೇಳುವ ಮೂಲಕ ಪಾಕಿಸ್ತಾನವನ್ನು ಹಾಡಿ ಹೊಗಳಿದ್ದು ಇತ್ತೀಚೆಗಷ್ಟೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕಾಗೋಡು ತಿಮ್ಮಪ್ಪ