Select Your Language

Notifications

webdunia
webdunia
webdunia
webdunia

ಜೆಡಿಎಸ್ ಆಯ್ತು, ಕಾಂಗ್ರೆಸ್ ಆಯ್ತು, ಬಿಜೆಪಿಗೆ ಬಂತು ಭಿನ್ನಮತದ ಭೂತ

ಬಿಜೆಪಿ
ಬೆಂಗಳೂರು , ಮಂಗಳವಾರ, 28 ಜೂನ್ 2016 (13:03 IST)
ಜಿಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿದ ಅತೃಪ್ತ ಬಿಜೆಪಿ ನಾಯಕರು ನಗರದ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜಿಲ್ಲಾ ನಾಯಕರುಗಳನ್ನು ವಿಶ್ವಸಕ್ಕೆ ತೆಗೆದುಕೊಳ್ಳದೇ ಪದಾಧಿಕಾರಿಗಳ ನೇಮಕ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅತೃಪ್ತ ಬಿಜೆಪಿ ಮುಖಂಡರ ಆರೋಪವಾಗಿದೆ.
 
ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿರುವುದು ನಿಜ. ಆದರೆ, ದೊಡ್ಡ ಮಟ್ಟದ ಗೊಂದಲಗಳಿಲ್ಲ. ಕೆಲವೇ ದಿನಗಳಲ್ಲಿ ಗೊಂದಲಗಳು ನಿವಾರಣೆಯಾಗಲಿವೆ ಎಂದು ಹೇಳಿಕೆ ನೀಡಿದ್ದರು.
 
ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಬಿಜೆಪಿ ಪದಾಧಿಕಾರಿಗಳ ಆಯ್ಕೆ ಬಗ್ಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧವೇ ಗುಡುಗಿದ್ದರು. ಯಡಿಯೂರಪ್ಪ ತಮಗೆ ಆಪ್ತರಾದವರಿಗೆ ಮಣೆಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ ಆರೋಪಗಳನ್ನು ತಳ್ಳಿಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಆರೋಪಗಳನ್ನು ತಳ್ಳಿಹಾಕಿದ್ದಾರೆ.   

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತುಳಸಿದಾಸ್ ಜಿ, ನಮಸ್ಕಾರ: ಮರುಪರೀಕ್ಷೆಯಲ್ಲಿ ಬಿಹಾರ್ ಟಾಪರ್ ಬರೆದ ಒಂದು ಸಾಲಿನ ಪ್ರಬಂಧ