ಚುನಾವಣೆ ಟೈಂನಲ್ಲಿ ಅನಂತ್ ಕುಮಾರ್ ಹೆಗ್ಡೆಗೆ ಇದು ಬೇಕಿತ್ತಾ? ಬಿಜೆಪಿ ಹೈಕಮಾಂಡ್ ಗರಂ

Krishnaveni K
ಸೋಮವಾರ, 11 ಮಾರ್ಚ್ 2024 (12:33 IST)
ಬೆಂಗಳೂರು: ಚುನಾವಣೆ ಹತ್ತಿರ ಬಂದಾಗ ದಿನಕ್ಕೊಂದು ಉಗ್ರ ಹೇಳಿಕೆ ನೀಡುತ್ತಿರುವ ಉತ್ತರ ಕರ್ನಾಟಕ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಈಗ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಪ್ಲಸ್ ಸ್ಥಾನಗಳನ್ನು ಗೆದ್ದರೆ ಸಂವಿಧಾನ ಬದಲಾಯಿಸಬಹುದು ಎಂದು ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು. ಯಾವ ರೀತಿ ಬಿಜೆಪಿ ಸಂವಿಧಾನ ಬದಲಾಯಿಸಲಿದೆ ಎಂದು ಹೇಳಲಿ ಎಂದಿದ್ದರು. ಅಲ್ಲದೆ, ಅನಂತ್ ಕುಮಾರ್ ಹೇಳಿಕೆ ಬಿಜೆಪಿಗೇ ಮುಜುಗರ ತಂದಿತ್ತು.

ಇದರ ಬೆನ್ನಲ್ಲೇ ಈಗ ಬಿಜೆಪಿ ಹೈಕಮಾಂಡ್ ಈ ಬಗ್ಗೆ ಗರಂ ಆಗಿದ್ದು, ವಿವರಣೆ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಅನಂತ್ ಕುಮಾರ್ ಹೆಗ್ಡೆ ಇಂತಹದ್ದೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಂತೇ ಬಿಜೆಪಿ ಇದಕ್ಕೆ ಸ್ಪಷ್ಟನೆ ನೀಡಿದ್ದು, ಇದು ಅವರ ವೈಯಕ್ತಿಕ ಹೇಳಿಕೆಯಷ್ಟೇ ಹೊರತು, ಪಕ್ಷದ ಹೇಳಿಕೆಯಲ್ಲ ಎಂದಿತ್ತು.

ಲೋಕಸಭೆ ಚುನಾವಣೆಯ ಸೂಕ್ಷ್ಮ ಸಮಯದಲ್ಲಿ ಅನಂತ್ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ತರಬಹುದು. ಹೀಗಾಗಿ ಬಿಜೆಪಿ ಹೈಕಮಾಂಡ್ ಇದರ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಿದೆ. ಅನಂತ್ ಕುಮಾರ್ ಹೆಗ್ಡೆ ಇಂತಹದ್ದೊಂದು ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಬಾರಿ ಚುನಾವಣೆ ವೇಳೆಯೂ ಇದೇ ಅಸ್ತ್ರ ಬಳಸಿ ವಿವಾದಕ್ಕೆ ಕಾರಣರಾಗಿದ್ದರು. ಇಂತಹ ಹೇಳಿಕೆಗಳನ್ನು ನೀಡುವುದು ಸುಲಭ. ಆದರೆ ಅದರಿಂದ ಪಕ್ಷಕ್ಕೆ ಆಗುವ ಹಾನಿ ದೊಡ್ಡದು. ಮೊದಲೇ ಚುನಾವಣೆ ಬಂದಾಗ ಅನಂತ್ ಕುಮಾರ್ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಾರೆ ಎಂಬ ಅಪವಾದವಿದೆ. ಪಕ್ಷವನ್ನು ಗೆಲ್ಲಿಸಲು ಇಂತಹ ಹೇಳಿಕೆಗಳೊಂದೇ ಸಾಕಾಗಾದು. ಅನಂತ್ ಈ ಹೇಳಿಕೆ ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗುತ್ತದೆ. ಹೀಗಾಗಿ ಈ ಬಾರಿ ಸ್ವತಃ ಬಿಜೆಪಿ ಹೈಕಮಾಂಡ್ ಅವರ ಹೇಳಿಕೆ ವಿರುದ್ಧ ಗರಂ ಆಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

AN-32 ವಿಮಾನ ಐವರು ಸೈನಿಕರು ಹುತಾತ್ಮ, ಕುಟುಂಬದ ಜತೆ ನಾವಿದ್ದೇವೆಂದ ರಾಜ್‌ನಾಥ್ ಸಿಂಗ್

ಕರಾವಳಿ ಭೇಟಿ ಪವರ್ ಫುಲ್ ದೇವರ ಮೊರೆ ಹೋದ ಸಚಿವೆ ನಿರ್ಮಲಾ ಸೀತಾರಾಮನ್

Video: ಮೋದಿ ಹುಟ್ಟಿದ್ದೂ ಔರಂಗಜೇಬನ ನಾಡಿನಲ್ಲಿ..ಅವನಂತೇ ಮೋದಿಯೂ ಕ್ರೂರಿ: ಸಂಜಯ್ ರಾವತ್ ವಿವಾದ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments