Publish Date: Thu, 15 Jun 2023 (20:27 IST)
Updated Date: Thu, 15 Jun 2023 (19:06 IST)
ಶಿವಮೊಗ್ಗದಲ್ಲಿ ಮೆಸ್ಕಾಂ ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಸಹ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ಗೇಟ್ ಬಳಿಯೇ ಶಿವಮೊಗ್ಗ ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ ಹಾಕಿ ಒಳಗೆ ಹೋಗದಂತೆ ತಡೆದಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಗ್ರಾಮಾಂತರ ಮಾಜಿ ಶಾಸಕ ಅಶೋಕ್ ನಾಯ್ಕ್ ಜೊತೆ ಪೊಲೀಸರು ಮಾತುಕತೆ ನಡೆಸಿದ್ಧಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರ ವಾಗ್ವಾದ ನಡೆಸಿದ್ದಾರೆ. ಸಂಸದ ರಾಘವೇಂದ್ರ, ಮಾಜಿ ಶಾಸಕ ಅಶೋಕ್ ನಾಯ್ಕ್ರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ.