ಎಂ.ಎಲ್.ಸಿ.ಯಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಆಯ್ಕೆ..!!!

Webdunia
ಗುರುವಾರ, 4 ಆಗಸ್ಟ್ 2022 (17:25 IST)
ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆಯಾಗಿದ್ದಾರೆ.
 
ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ಎಂಎಲ್​ಸಿ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ.11ರಂದು ಮತದಾನ ನಡೆಯಬೇಕಿತ್ತು.
 
ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅಖಾಡಕ್ಕಿಳಿದರೆ, ಕಾಂಗ್ರೆಸ್​ ಮತ್ತು ಜೆಡಿಎಸ್​ನಿಂದ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ ವಿಧಾನಸಭೆ ಕಾರ್ಯದರ್ಶಿಯೂ ಆದ‌ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಬಾಬುರಾವ್ ಚಿಂಚನಸೂರ್ ಹೆಸರನ್ನು ಅವಿರೋಧ ಆಯ್ಕೆಯನ್ನಾಗಿ ಗುರುವಾರ ಘೋಷಣೆ ಮಾಡಿದರು.
 
ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್​ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. 2024ರ ಜೂನ್ 17ರ ವರೆಗೂ ಎಂಎಲ್​ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಬಾಬುರಾವ್ ಚಿಂಚನಸೂರ್ ಆಯ್ಕೆಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments