ಎಂ.ಎಲ್.ಸಿ.ಯಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಆಯ್ಕೆ..!!!

Webdunia
ಗುರುವಾರ, 4 ಆಗಸ್ಟ್ 2022 (17:25 IST)
ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆಯಾಗಿದ್ದಾರೆ.
 
ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ಎಂಎಲ್​ಸಿ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ.11ರಂದು ಮತದಾನ ನಡೆಯಬೇಕಿತ್ತು.
 
ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅಖಾಡಕ್ಕಿಳಿದರೆ, ಕಾಂಗ್ರೆಸ್​ ಮತ್ತು ಜೆಡಿಎಸ್​ನಿಂದ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ ವಿಧಾನಸಭೆ ಕಾರ್ಯದರ್ಶಿಯೂ ಆದ‌ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಬಾಬುರಾವ್ ಚಿಂಚನಸೂರ್ ಹೆಸರನ್ನು ಅವಿರೋಧ ಆಯ್ಕೆಯನ್ನಾಗಿ ಗುರುವಾರ ಘೋಷಣೆ ಮಾಡಿದರು.
 
ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್​ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. 2024ರ ಜೂನ್ 17ರ ವರೆಗೂ ಎಂಎಲ್​ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಬಾಬುರಾವ್ ಚಿಂಚನಸೂರ್ ಆಯ್ಕೆಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments