Publish Date: Sun, 15 Oct 2017 (13:00 IST)
Updated Date: Sun, 15 Oct 2017 (13:01 IST)
ಬಿಜೆಪಿಯವರ ಪರಿವರ್ತನಾ ರ್ಯಾಲಿಗೆ ಯಾರು ಮರಳಾಗುವುದಿಲ್ಲ. ಬಿಜೆಪಿಯವರಿಗೆ ಕೋಮುವಾದದಲ್ಲಿ ಮಾತ್ರ ನಂಬಿಕೆಯಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಪರಿವರ್ತನೆ ಎಂದರೆ ಸಮಾಜ ಪರಿವರ್ತನೆಯಲ್ಲ. ಸಮಾಜ ಒಡೆಯುವುದೇ ಅವರ ಪರಿವರ್ತನೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರು ಯಾವತ್ತಾದರೂ ರೈತರ, ಮಹಿಳೆಯರ ಪರ ಮಾತನಾಡಿದ್ದಾರಾ? ಕೇವಲ ಒಂದು ಸಮುದಾಯವನ್ನು ಎತ್ತಿಕಟ್ಟಿ ಮತ್ತೊಂದು ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಗುಡುಗಿದರು.
ಹಿಂದೆ ಇದ್ದ ಸರಕಾರಗಳು ಬರೀ ತಿಂದು ತೇಗಿ ಹೋಗಿವೆ. ಮಳೆ ವಿಚಾರದಲ್ಲಿ ನಮ್ಮ ಸರಕಾರ ಸಮರ್ಥವಾಗಿ ಕೆಲಸ ಮಾಡಿದೆ. ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. ಇಂಥ ಮಳೆಯನ್ನು ರಾಜಕಾಲುವೆಗಳು ತಡೆಯುವುದಿಲ್ಲ ಎಂದರು.
ಬಿಜೆಪಿ ರಸ್ತೆಗುಂಡಿಗೆ ಬಣ್ಣ ಬಳಿದು ನಾಟಕವಾಡುತ್ತಿದೆ. ಹಿಂದೆ ಇದ್ದ ಮುಖ್ಯಮಂತ್ರಿಗಳು ಏನು ಮಾಡಿದ್ದಾರೆ? ಇಂತಹ ಬಿಜೆಪಿ ನಾಯಕರಿಗೆ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.