Webdunia - Bharat's app for daily news and videos

Install App

ಬಿಜೆಪಿಯವರಿಗೆ ಕೋಮುವಾದದಲ್ಲಿ ಮಾತ್ರ ನಂಬಿಕೆ: ಸಿಎಂ ಆಕ್ರೋಶ

Webdunia
ಭಾನುವಾರ, 15 ಅಕ್ಟೋಬರ್ 2017 (13:00 IST)
ಬಿಜೆಪಿಯವರ ಪರಿವರ್ತನಾ ರ್ಯಾಲಿಗೆ ಯಾರು ಮರಳಾಗುವುದಿಲ್ಲ. ಬಿಜೆಪಿಯವರಿಗೆ ಕೋಮುವಾದದಲ್ಲಿ ಮಾತ್ರ ನಂಬಿಕೆಯಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಪರಿವರ್ತನೆ ಎಂದರೆ ಸಮಾಜ ಪರಿವರ್ತನೆಯಲ್ಲ. ಸಮಾಜ ಒಡೆಯುವುದೇ ಅವರ ಪರಿವರ್ತನೆ ಎಂದು ಕಿಡಿಕಾರಿದ್ದಾರೆ.
 
ಬಿಜೆಪಿಯವರು ಯಾವತ್ತಾದರೂ ರೈತರ, ಮಹಿಳೆಯರ ಪರ ಮಾತನಾಡಿದ್ದಾರಾ? ಕೇವಲ ಒಂದು ಸಮುದಾಯವನ್ನು ಎತ್ತಿಕಟ್ಟಿ ಮತ್ತೊಂದು ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಗುಡುಗಿದರು.
 
ಹಿಂದೆ ಇದ್ದ ಸರಕಾರಗಳು ಬರೀ ತಿಂದು ತೇಗಿ ಹೋಗಿವೆ. ಮಳೆ ವಿಚಾರದಲ್ಲಿ ನಮ್ಮ ಸರಕಾರ ಸಮರ್ಥವಾಗಿ ಕೆಲಸ ಮಾಡಿದೆ. ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. ಇಂಥ ಮಳೆಯನ್ನು ರಾಜಕಾಲುವೆಗಳು ತಡೆಯುವುದಿಲ್ಲ ಎಂದರು.
 
ಬಿಜೆಪಿ ರಸ್ತೆಗುಂಡಿಗೆ ಬಣ್ಣ ಬಳಿದು ನಾಟಕವಾಡುತ್ತಿದೆ. ಹಿಂದೆ ಇದ್ದ ಮುಖ್ಯಮಂತ್ರಿಗಳು ಏನು ಮಾಡಿದ್ದಾರೆ? ಇಂತಹ ಬಿಜೆಪಿ ನಾಯಕರಿಗೆ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments