Webdunia - Bharat's app for daily news and videos

Install App

ಬಿಜೆಪಿಯವರಿಗೆ ಕೋಮುವಾದದಲ್ಲಿ ಮಾತ್ರ ನಂಬಿಕೆ: ಸಿಎಂ ಆಕ್ರೋಶ

Webdunia
ಭಾನುವಾರ, 15 ಅಕ್ಟೋಬರ್ 2017 (13:00 IST)
ಬಿಜೆಪಿಯವರ ಪರಿವರ್ತನಾ ರ್ಯಾಲಿಗೆ ಯಾರು ಮರಳಾಗುವುದಿಲ್ಲ. ಬಿಜೆಪಿಯವರಿಗೆ ಕೋಮುವಾದದಲ್ಲಿ ಮಾತ್ರ ನಂಬಿಕೆಯಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಪರಿವರ್ತನೆ ಎಂದರೆ ಸಮಾಜ ಪರಿವರ್ತನೆಯಲ್ಲ. ಸಮಾಜ ಒಡೆಯುವುದೇ ಅವರ ಪರಿವರ್ತನೆ ಎಂದು ಕಿಡಿಕಾರಿದ್ದಾರೆ.
 
ಬಿಜೆಪಿಯವರು ಯಾವತ್ತಾದರೂ ರೈತರ, ಮಹಿಳೆಯರ ಪರ ಮಾತನಾಡಿದ್ದಾರಾ? ಕೇವಲ ಒಂದು ಸಮುದಾಯವನ್ನು ಎತ್ತಿಕಟ್ಟಿ ಮತ್ತೊಂದು ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಗುಡುಗಿದರು.
 
ಹಿಂದೆ ಇದ್ದ ಸರಕಾರಗಳು ಬರೀ ತಿಂದು ತೇಗಿ ಹೋಗಿವೆ. ಮಳೆ ವಿಚಾರದಲ್ಲಿ ನಮ್ಮ ಸರಕಾರ ಸಮರ್ಥವಾಗಿ ಕೆಲಸ ಮಾಡಿದೆ. ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. ಇಂಥ ಮಳೆಯನ್ನು ರಾಜಕಾಲುವೆಗಳು ತಡೆಯುವುದಿಲ್ಲ ಎಂದರು.
 
ಬಿಜೆಪಿ ರಸ್ತೆಗುಂಡಿಗೆ ಬಣ್ಣ ಬಳಿದು ನಾಟಕವಾಡುತ್ತಿದೆ. ಹಿಂದೆ ಇದ್ದ ಮುಖ್ಯಮಂತ್ರಿಗಳು ಏನು ಮಾಡಿದ್ದಾರೆ? ಇಂತಹ ಬಿಜೆಪಿ ನಾಯಕರಿಗೆ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments