Webdunia - Bharat's app for daily news and videos

Install App

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!

Webdunia
ಶನಿವಾರ, 13 ಅಕ್ಟೋಬರ್ 2018 (15:02 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಮತ ಹಾಕಲ್ಲ. ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಿದ್ದರೆ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುವುದು ಕಷ್ಟ ಎಂದು ಕೆಪಿಸಿಸಿ ಒಬಿಸಿ ವಿಭಾಗ ಪ್ರಧಾನ ಕಾರ್ಯದರ್ಶಿ ಕೊತ್ತತ್ತಿ ಸಿದ್ದಪ್ಪ, ರಾಜ್ಯ ಕಾಂಗ್ರೆಸ್ ಮಾಹಿತಿ  ತಂತ್ರಜ್ಞಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್ಎಂ.ರಾಜಪ್ಪ, ರಾಜ್ಯ ಕಾಂಗ್ರೆಸ್ ಕಾನೂನು ಘಟಕ ಉಪಾಧ್ಯಕ್ಷ ಕೆಎನ್.ನಾಗರಾಜು ಅವರಿಂದ ವರಿಷ್ಠರ ಗಮನಕ್ಕೆ ತರಲಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಲಾಗಿದ್ದು, ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆರೆಡು ಪ್ರತಿ ಗ್ರಾಮದಲ್ಲೂ ಪರಸ್ಪರ ವಿರೋಧಿಗಳಾಗಿದ್ದಾರೆ. ಇದುವರೆಗೂ ಎರಡು ಪಕ್ಷದವರು ವಿರೋಧಿಗಳಾಗಿ ಚುನಾವಣೆ ಎದುರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಒಲವು ತೋರಿಸಬಹುದು.

ಹೀಗಂತ ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸೋಲುವ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಎಚ್ಚರಿಕೆ ನೀಡುತ್ತಿರುವುದು ಹೊಸ ಬೆಳವಣಿಗೆಯಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments