Webdunia - Bharat's app for daily news and videos

Install App

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

Webdunia
ಶನಿವಾರ, 10 ಫೆಬ್ರವರಿ 2018 (20:18 IST)
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕೋಮುವಾದದ ಮೂಲಕ ರಾಜ್ಯದಲ್ಲಿ  ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿಯವರ ಕನಸು ನನಸಾಗದು ಎಂದಿದ್ದಾರೆ.

ರಾಜ್ಯಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಮಹಾದಾಯಿ  ನೀರಿನ ವಿವಾದವನ್ನು ಪ್ರಸ್ತಾಪಿಸದೆ ಆಧಾರ ರಹಿತವಾದ ಆರೋಪಗಳನ್ನು ಮಾಡಿ ಹೋಗಿದ್ದಾರೆ.  ಅವರು ದೇಶದ ಪ್ರಧಾನಿಯಾಗಲು ಅರ್ಹರಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಿರುದ್ಧ ಎಂದಿನ ಶೈಲಿಯಂತೆ ವಾಗ್ದಾಳಿ ನಡೆಸಿದ ಅವರು ಬಿಜೆಪಿ ಆಡಳಿತದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಮೂಲಕ ಬಳ್ಳಾರಿ ರಿಪಬ್ಲಿಕ್ ಬಳ್ಳಾರಿ ಎಂಬ ಕಳಂಕವನ್ನು ಹೊಂದಿತ್ತು. ಈ ಕಳಂಕ  ತೊಡೆದು ಹಾಕಲು ಕಾಂಗ್ರೆಸ್ ಶ್ರಮಿಸಿದೆ. ಭಯದ ವಾತಾವರಣ ದೂರ ಮಾಡಲು ಬಳ್ಳಾರಿಗೆ ಪಾದಯಾತ್ರೆ ನಡೆಸಲಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments