Webdunia - Bharat's app for daily news and videos

Install App

ತನಗೆ ಸೋಲು ಖಚಿತ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್

Webdunia
ಭಾನುವಾರ, 2 ಮೇ 2021 (11:57 IST)
ರಾಯಚೂರು : ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಎಣಿಕೆಗೆ ಇನ್ನು ಹಲವು ಸುತ್ತು ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ತುರ್ವಿಹಾಳ್ ಅವರು ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಪ್ರತಾಪ್ ಗೌಡ ಪಾಟೀಲ್ ಮತ ಎಣಿಕೆ ಕೇಂದ್ರದಿಂದ ಹೊರನಡೆದಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದೆ. ಮತದಾರರು ತಮ್ಮ ವಿರುದ್ಧ ಮತ ಹಾಕಿರುವುದು ಆಡಳಿತ ವಿರೋಧಿ ಅಲೆಯಿಂದ ಸ್ಪಷ್ಟವಾಗಿದೆ. ಬಹುತೇಕ ಕಡೆ ನಿರೀಕ್ಷೆಯಂತೆ ಮತ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments