ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Krishnaveni K
ಗುರುವಾರ, 18 ಏಪ್ರಿಲ್ 2024 (17:07 IST)
ಬೆಂಗಳೂರು: ಕಲಬುರ್ಗಿಯಲ್ಲಿ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ. ಈ ಕುರಿತು ಇಂದು ನಿಯೋಗವು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.
 
ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇನ್ನೊಂದು ದೂರು ಕೊಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್‍ನ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಆಗ್ರಹಿಸಲಾಯಿತು.

ಕುಣಿಗಲ್ ತಾಲ್ಲೂಕಿನ ಚಿಕ್ಕಅರ್ಜೇನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ಬಿನ್ ಪಿ.ಜಿ.ರಾಮಯ್ಯರವರ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನೊಂದಿರುವ ಪ್ರೇಮ್ ಕುಮಾರ್ ಅವರಿಗೆ ಭದ್ರತೆ ಕೊಡಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸ್ ಅಧಿಕಾರಿಗಳು, ಪೊಲೀಸರನ್ನು ಅಮಾನತುಪಡಿಸಲು ಒತ್ತಾಯಿಸಿ ದೂರು ಕೊಡಲಾಯಿತು.

ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments