Select Your Language

Notifications

webdunia
webdunia
webdunia
Tuesday, 15 April 2025
webdunia

ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟಿಸಿದ ಬಿಜೆಪಿ

ಸಿಎಂ
ಧಾರವಾಡ , ಸೋಮವಾರ, 19 ನವೆಂಬರ್ 2018 (17:03 IST)
ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೀಯಾ ಎಂದು ಅಸಹ್ಯವಾಗಿ ಕೇಳಿ ರಾಜ್ಯದ ರೈತ ಮಹಿಳೆಗೆ ಅವಮಾನ ಮಾಡಿದ ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ  ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡ ನಗರದ ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೀಯಾ ಎಂದು ಮುಖ್ಯಮಂತ್ರಿ ಪ್ರಶ್ನಿಸುತ್ತಾರೆ. ಈ ಹೇಳಿಕೆಯಿಂದ ರೈತ ಮಹಿಳೆಗೆ ನೋವಾಗಿದೆ. ಕೂಡಲೇ ಸಿಎಂ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಪ್ರತಿಭಟನೆಗೆ ಸ್ವಾಮೀಜಿ ಸಾಥ್