Webdunia - Bharat's app for daily news and videos

Install App

ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಕಪ್ಪ ಕೊಡುವ ಸಂಪ್ರದಾಯ: ಕುಮಾರಸ್ವಾಮಿ

Webdunia
ಶುಕ್ರವಾರ, 24 ಫೆಬ್ರವರಿ 2017 (13:48 IST)
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಕಪ್ಪ ಕೊಡುವ ಸಂಪ್ರದಾಯವಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಎರಡು ರಾಷ್ಟ್ರೀಯ ಪಕ್ಷಗಳಿಗೆ ಕಪ್ಪ ಕೊಡುವ ಸಂಪ್ರದಾಯವಿದ್ದು, 2010ರಲ್ಲೂ ಬಿಜೆಪಿ ಹೈಕಮಾಂಡ್‌ಗೆ ಕಪ್ಪ ನೀಡಿತ್ತು ಎಂದು ನೇರ ಆರೋಪ ಮಾಡಿದ್ದಾರೆ. 
 
ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಹುಲ್ಲುಗಾವಲುನಂತಾಗಿದೆ. ರಾಜ್ಯವನ್ನು ಲೂಟಿ ಮಾಡಿ ಹೈಕಮಾಂಡ್‌ಗಳಿಗೆ ಕಪ್ಪ ಹಣ ರವಾನಿಸಲಾಗುತ್ತಿದೆ. ರಾಜ್ಯ ಸರಕಾರಗಳಿಗೆ ಅನುದಾನ ನೀಡದ ಕೇಂದ್ರ ಸರಕಾರ ರಾಜ್ಯದ ಸಂಪತ್ತನ್ನು ಲೂಟಿ ಹೊಡೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಹಣ ಸಂಗ್ರಹಿಸಲಾಗುತ್ತಿದೆ. ಕಪ್ಪ ಕೊಡುವ ವಿಚಾರದಲ್ಲಿ ಎರಡು ಪಕ್ಷಗಳು ಒಂದೇ. ಬಿಜೆಪಿ ಸರಕಾರದಲ್ಲಿ ಯಾವ ರೀತಿ ಕಪ್ಪ ನೀಡಲಾಗಿದೆ ಎನ್ನುವುದು ನನಗೆ ಗೊತ್ತಿದೆ
 
ಇದೀಗ ಗೋವಿಂದರಾಜು ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಹಣ ಯಾವ ರೀತಿ ರವಾನೆಯಾಗಿದೆ ಎನ್ನುವುದು ಬಹಿರಂಗವಾಗಿದೆ.
 
ಈ ಪ್ರಕರಣಗಳಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಬಣ್ಣ ಬಯಲಾಗಿದೆ. ರಾಜ್ಯದ ಜನತೆಗೆ ಪುಕ್ಕಟೆ ಮನೋರಂಜನೆ ದೊರೆಯುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments