Publish Date: Sat, 13 Jan 2018 (08:58 IST)
Updated Date: Sat, 13 Jan 2018 (09:00 IST)
ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಭಾರೀ ಡ್ರಾಮಾ ಮಾಡ್ತಿವೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಒಂದೆಡೆ ಮಹದಾಯಿ ಹೋರಾಟಗಾರರ ಬಂದ್ ಗೆ ಆಡಳಿತಾರೂಢ ಕಾಂಗ್ರೆಸ್ ಪರೋಕ್ಷ ಬೆಂಬಲ ಸೂಚಿಸಿದೆ. ಇನ್ನೊಂದೆಡೆ ಬಿಜೆಪಿ ಸಂಪೂರ್ಣ ಮೌನ ವಹಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಹದಾಯಿ ವಿಚಾರದಲ್ಲಿ ನಾವೂ ಬಂದ್ ಗೆ ಬೆಂಬಲ ನೀಡುತ್ತೇವೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದು ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿ. ಸಮಸ್ಯೆಯಿಟ್ಟುಕೊಂಡು ಎರಡೂ ಪಕ್ಷಗಳು ನೋವಿನ ಸಮಾಧಿಯ ಮೇಲೆ ರಾಜಕೀಯ ಮಾಡುವುದು ನಿಲ್ಲಿಸಲಿ ಎಂದು ಅವರು ಕುಟುಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ