Publish Date: Thu, 08 Feb 2018 (09:48 IST)
Updated Date: Thu, 08 Feb 2018 (09:50 IST)
ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಮತ್ತೊಂದು ತಿರುವು ಪಡೆದುಕೊಂಡಿದೆ.
ಕದೀರೇಶ್ ಸಂಬಂಧಿಯಾಗಿರುವ ಯುವತಿಯೊಂದಿಗೆ ಓಡಿಹೋಗಲು ನಿರ್ಧರಿಸಿದ್ದ ನವೀನ ಮೇಲೆ ಕದೀರೇಶ್ ಹಾಗೂ ಸ್ನೇಹಿತರು ಹಲ್ಲೆ ನಡೆಸಿ, ಬುದ್ದಿ ಹೇಳಿದ್ದರು. ಇದೇ ವಿಷಯಕ್ಕೆ ನವೀನ್ ಹಾಗೂ ಇತರರು ಕೂಡಿಕೊಂಡು ಕೊಲೆ ಮಾಡಿದ್ದಾರೆ.
ಆಂಜಿನಪ್ಪ ಗಾರ್ಡನ್ ಬಳಿ ಇರುವ ಕದಿರೇಶ್ ಅವರ ಮನೆಗೆ ನುಗ್ಗಿದ ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.