ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆರ್.ಅಶೋಕ್ ಆಗ್ರಹ

Webdunia
ಬುಧವಾರ, 6 ಸೆಪ್ಟಂಬರ್ 2017 (17:53 IST)
ಬೆಂಗಳೂರು: ವೈಚಾರಿಕ ವಿಚಾರಗಳು ಯಾವುವೇ ಆದರೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರ ಅತ್ಯಂತ ಖಂಡನೀಯ. ಈ ಸಾವಿನಲ್ಲಿ ರಾಜಕಾರಣ ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹತ್ಯೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿದೆ. ಇದು ಸಿಐಡಿಯ ಒಂದು ಭಾಗ. ಹೀಗಾಗಿ ಸತ್ಯ ಹೊರಬರುವುದಿಲ್ಲ. ಹೀಗಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. 

ಈ ಘಟನೆಯಲ್ಲಿ ಯಾರ ಕೈವಾಡವಿದೆಯೆಂಬುದು ತಿಳಿದಿಲ್ಲ. ರಾಜ್ಯದವರು ಮಾಡಿದ್ದಾರಾ, ಇಲ್ಲ ಹೊರರಾಜ್ಯದವರ ಕೈವಾಡವಿದೆಯೋ ತಿಳಿದಿಲ್ಲ. ಎಂ.ಎಂ.ಕಲಬುರ್ಗಿ ಹತ್ಯೆಯಾಗಿ ಎರಡು ವರ್ಷವಾಗಿದೆ. ಆದರೂ ಆರೋಪಿಗಳ ಸುಳಿವಿಲ್ಲ. ಈಗಾಗಲೇ ಹಲವು ಮುಖಂಡರ ಹತ್ಯೆಗಳಾಗಿವೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ನೀಡಿಲ್ಲ. ಗೌರಿ ಲಂಕೇಶ್ ಹತ್ಯೆ ಮಾಡಿದವರು ಯಾರೇ ಆಗಲಿ, ಎಷ್ಟೇ ದೊಡ್ಡವರಾದವರಾದರೂ ಆದರು ಸರಿ. ಅವರನ್ನ ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಗುಪ್ತಚರ ಇಲಾಖೆ ತಂಡ ಉತ್ತಮವಾಗಿದೆ. ಅವರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಆ ಕೆಲಸವನ್ನ ಗೃಹ ಸಚಿವರು ಮಾಡಬೇಕು. ಗುಪ್ತಚರ ಇಲಾಖೆ ವೈಫಲ್ಯವಾಗಿಲ್ಲ ಎಂದರು.

ಇನ್ನು ಮಂಗಳೂರು ಚಲೋ ಬಗ್ಗೆ ಮಾತನಾಡಿ, ಸೆ. 7ರಂದು ನಮ್ಮ ಮಂಗಳೂರು ಚಲೋ ನಡೆಯಲಿದೆ. ಯಾವುದೇ ಕಾರಣಕ್ಕೂ ನಿಲ್ಲಲ್ಲ. ಯಡಿಯೂರಪ್ಪ ಕೂಡ  ಇದರಲ್ಲಿ ಭಾಗಿಯಾಗಲಿದ್ದಾರೆ ಎಂದು ಆರ್.ಅಶೋಕ್ ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments