ಸಂಪುಟದಿಂದ ರಮಾನಾಥ ರೈ ವಜಾಕ್ಕೆ ಬಿಜೆಪಿ ಆಗ್ರಹ

Webdunia
ಶನಿವಾರ, 2 ಸೆಪ್ಟಂಬರ್ 2017 (14:53 IST)
ಮಂಗಳೂರು: ರಮಾನಾಥ ರೈ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ದಕ್ಷಿಣ ಕನ್ನಡದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಚಿವ ರಮಾನಾಥ ರೈ ಕೋಮು ಸೌಹಾರ್ದತೆ ಕೆಡಿಸಿ, ಹಿಂದೂ ಕಾರ್ಯಕರ್ತರ ಕೊಲೆಗೆ ಪ್ರೇರೇಪಣೆ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರೀಶ್ ಪೂಂಜಾ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮೇಲೆ ಹಿಂದೂ ಕಾರ್ಯಕರ್ತರ ಕೊಲೆ ಸಂಬಂಧಿಸಿದಂತೆ ಸಚಿವ ರೈ ಪಾತ್ರದ ಬಗ್ಗೆ ತನಿಖೆ ನಡೆಸಿ, ಆರೋಪ ಸಾಬೀತಾದರೆ
ನ್ಯಾಯಾಲಯ ಖಂಡಿತ ಶಿಕ್ಷೆ‌ ವಿಧಿಸುತ್ತದೆ. ಸೆ. 12ರಂದು ಸಚಿವ ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಸೌಹಾರ್ದ ನಡಿಗೆ, ಡೋಂಗಿ ಜಾತ್ಯಾತೀತತೆಯ ನಡಿಗೆ ಎಂದು ವ್ಯಂಗ್ಯವಾಡಿದ್ದಾರೆ.

ಸಮಾಜಘಾತುಕ ಸಂಘಟನೆಗಳಿಗೆ, ಕೋಮು ಹಿಂಸೆಗೆ ರೈ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಚಿವ ರಮಾನಾಥ ರೈರನ್ನು ಸಂಪುಟದಿಂದ‌ ವಜಾಗೊಳಿಸಬೇಕು. ಅಲ್ಲದೆ ಹಿಂದೂಗಳ ಹತ್ಯೆ, ಹಲ್ಲೆ‌ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಸೆ.4ರಂದು ದಕ್ಷಿಣ ‌ಕನ್ನಡ ‌ಜಿಲ್ಲೆಯ ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲೂ ಪ್ರತಿಭಟನೆ ನಡೆಸಿ, ಬಳಿಕ ಸ್ಥಳೀಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಸೆ.7ರಂದು ರಾಜ್ಯದ 5 ವಿಭಾಗಗಳಿಂದ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಲಾಗುವುದು. ಬಿಜೆಪಿ, ಸಂಘ ಪರಿವಾರ ಕಾರ್ಯಕರ್ತರ ಹತ್ಯೆಯಲ್ಲಿ ಪಿಎಫ್ಐ, ಎಸ್ ಡಿಪಿಐ, ಕೆಎಫ್ ಡಿ‌ ಕೈವಾಡವಿದೆ. ಹೀಗಾಗಿ ಈ ಸಂಫಟನೆ, ಪಕ್ಷವನ್ನು ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ ಹಾಗೂ ಮಂಗಳೂರು ಚಲೋ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments