Select Your Language

Notifications

webdunia
webdunia
webdunia
Wednesday, 9 April 2025
webdunia

ಸಿಎಂ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ಕಾಗೇರಿ
ಕಾರವಾರ , ಶುಕ್ರವಾರ, 21 ಸೆಪ್ಟಂಬರ್ 2018 (16:54 IST)
ಬಿಜೆಪಿ ವಿರುದ್ಧ ದಂಗೆ ಏಳುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಶಾಸಕ ಆಗ್ರಹಿಸಿದ್ದಾರೆ. 

ಸಿಎಂ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಬೇಕು. ಬಿ.ಎಸ್. ಯಡಿಯೂರಪ್ಪನವರ ಮನೆ ಮುಂದೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದ್ದನ್ನು  ಖಂಡಿಸುತ್ತೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಶಿರಸಿಯಲ್ಲಿ ಶಾಸಕ ಕಾಗೇರಿ ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಹೇಳಿಕೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಇದು ಜೆಡಿಎಸ್ ಮತ್ತು ಕಾಂಗ್ರೆಸ್ ನ ಗೂಂಡಾಗಳ ಕೆಲಸವಾಗಿದೆ. ಅವರ ಒಳ ಜಗಳದಿಂದಲೇ ಸರ್ಕಾರ ಬೀಳುವ ಸ್ಥಿತಿ ತಲುಪಿದೆ ಎಂದರು. ಇದನ್ನರಿತ ಮುಖ್ಯಮಂತ್ರಿ ದಂಗೆಗೆ ಪ್ರಚೋದನೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಕೆಲಸ ನಿರ್ವಹಿಸುವುದನ್ನು ಬಿಟ್ಟು ಜಗಳವಾಡುತ್ತಿದೆ. ಇವರ ಆಂತರಿಕ ಕಚ್ಚಾಟದಿಂದ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು