Publish Date: Tue, 20 Feb 2018 (13:33 IST)
Updated Date: Tue, 20 Feb 2018 (13:34 IST)
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ವಿರೋಧಿಗಳು ಇಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರಿಗೆ ಚುನಾವಣೆಯನ್ನು ಗೆಲ್ಲುವ ತಾಕತ್ತಿದೆ. ಕರ್ನಾಟಕದಲ್ಲಿ ಮೊದಲ ನವಶಕ್ತಿ ಸಮಾವೇಶ ಆರಂಭವಾಗಿದ್ದು, ಪ್ರತಿ ಬೂತ್ನ ನವರತ್ನಗಳು ಬಂದಿದ್ದಾರೆ ಎಂದಿದ್ದಾರೆ.
2018ರ ಚುನಾವಣೆ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಈ ಚುನಾವಣೆ ಗೆದ್ದು ದಕ್ಷಿಣ ಭಾರತದಲ್ಲಿ ಕಮಲ ಅರಳಬೇಕಾಗಿದೆ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹೋಗಿ ಬಿಜೆಪಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.